ಕನ್ನಡದ ಬಾವುಟ ಸ್ವಾಭಿಮಾನದ ಸಂಕೇತ :ಎಲ್.ಜಿ.ಮಧುಕುಮಾರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಸಮಸ್ತ ಕನ್ನಡಿಗರ ಸ್ವಾಭಿಮಾನದ ಸಂಕೇತವಾದ ಕನ್ನಡದ ಬಾವುಟವನ್ನು ನವೆಂಬರ್ 1ರ ರಾಜ್ಯೋತ್ಸವದ ಸಂಭ್ರಮದಂದು ಎಲ್ಲ ಕನ್ನಡಿಗರು ತಮ್ಮ ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಕಣ್ವ ಎಂದೇ ಪ್ರಖ್ಯಾತರಾದ ಬಿ.ಎಂ.ಶ್ರೀಕಂಠಯ್ಯನವರು ರಚಿಸಿದ “ಏರಿಸಿ ಹಾರಿಸಿ ಕನ್ನಡದ ಬಾವುಟ, ಹಾರಿಸಿ ತೋರಿಸಿ ಕೆಚ್ಚೆದೆಯ ಬಾವುಟ” ಎನ್ನುವಂತೆ ಅರ್ಥಪೂರ್ಣವಾಗಿ ಕನ್ನಡ ಪ್ರೇಮವನ್ನು ಮೆರೆಯೋಣ ಎಂದು ಚನ್ನಗಿರಿ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷರಾದ ಬಸವಾಪಟ್ಟಣದ ಎಲ್.ಜಿ.ಮಧುಕುಮಾರ್ ಕರೆ ನೀಡಿದ್ದಾರೆ.

ನವೆಂಬರ್ 1 ರಂದು ರಾಜ್ಯೋತ್ಸವವನ್ನು ಪ್ರತಿಯೊಬ್ಬ ಕನ್ನಡಿಗರು ಕರ್ನಾಟಕ ಅಷ್ಟೇ ಅಲ್ಲದೇ ಗಡಿನಾಡಿನಾಚೆಗೂ ಸಂಭ್ರಮದಿಂದ ಆಚರಿಸುತ್ತಾರೆ. ಅದರೊಂದಿಗೆ ಈ ಬಾರಿ ಪ್ರತಿಯೊಬ್ಬ ಕನ್ನಡಿಗನೂ ನಮ್ಮ ಭಾಷೆ, ಸಂಸ್ಕೃತಿ, ಪರಂಪರೆಯ ಧ್ಯೋತಕವಾದ ಕನ್ನಡದ ಧ್ವಜವನ್ನು ಸ್ವ-ಇಚ್ಛೆಯಿಂದ, ಹೆಮ್ಮೆಯಿಂದ ಪ್ರತಿಯೊಬ್ಬರ ಮನೆಯ ಮೇಲೆ ಹಾರಿಸುವ ಮೂಲಕ ಕನ್ನಡದ ಹಬ್ಬವನ್ನು ಆಚರಿಸಬೇಕಾಗಿದೆ. ಎಲ್ಲೆಡೆಯೂ ಹಳದಿ ಕೆಂಪು ಬಣ್ಣಗಳ ಬಾವುಟ ರಾರಾಜಿಸಲಿ.ಸ್ಫೂರ್ತಿಯ ಸೆಲೆ ಎಲ್ಲೆಡೆಯೂ ಪಸರಿಸಲಿ, ಎಲ್ಲರ ಮನ-ಮನೆಗಳಲ್ಲೂ ಕನ್ನಡತನ ಮೆರೆಯಲಿ ಎಂದು ಆಶಯ ವ್ಯಕ್ತಪಡಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *