Connect with us

Dvgsuddi Kannada | online news portal | Kannada news online

ದಾವಣಗೆರೆ: ನ.07 ರಂದು ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

ration raice

ದಾವಣಗೆರೆ

ದಾವಣಗೆರೆ: ನ.07 ರಂದು ಜಪ್ತಿ ಮಾಡಿದ ಪಡಿತರ ಅಕ್ಕಿ ಬಹಿರಂಗ ಹರಾಜು

ದಾವಣಗೆರೆ: ಜಗಳೂರು ತಾಲ್ಲೂಕಿನ ಬಿಳಚೋಡು ಗ್ರಾಮದ ಹತ್ತಿರ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 25 ಚೀಲಗಳಲ್ಲಿರುವ 14.38 ಕ್ವಿಂಟಾಲ್ ಅಕ್ಕಿಯನ್ನು ಸೆ.04 ರಂದು ಜಪ್ತಿ ಮಾಡಿಕೊಂಡಿದ್ದರು. ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ನ.07 ರಂದು ಬೆಳಿಗ್ಗೆ 11 ಗಂಟೆಗೆ ಎ.ಪಿ.ಎಂ.ಸಿ ಆವರಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಜಗಳೂರು ಇಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.

ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್‍ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಜಗಳೂರು ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top