ದಾವಣಗೆರೆ: ಜಗಳೂರು ತಾಲ್ಲೂಕಿನ ಬಿಳಚೋಡು ಗ್ರಾಮದ ಹತ್ತಿರ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದ 25 ಚೀಲಗಳಲ್ಲಿರುವ 14.38 ಕ್ವಿಂಟಾಲ್ ಅಕ್ಕಿಯನ್ನು ಸೆ.04 ರಂದು ಜಪ್ತಿ ಮಾಡಿಕೊಂಡಿದ್ದರು. ಜಪ್ತಿ ಮಾಡಿಕೊಳ್ಳಲಾಗಿರುವ ಅಕ್ಕಿಯನ್ನು ಜಿಲ್ಲಾಧಿಕಾರಿಗಳ ಸೂಚನೆಯಂತೆ, ನ.07 ರಂದು ಬೆಳಿಗ್ಗೆ 11 ಗಂಟೆಗೆ ಎ.ಪಿ.ಎಂ.ಸಿ ಆವರಣದಲ್ಲಿರುವ ಕೆ.ಎಫ್.ಸಿ.ಎಸ್.ಸಿ ಸಗಟು ಮಳಿಗೆ ಜಗಳೂರು ಇಲ್ಲಿ ಸಹಾಯಕ ನಿರ್ದೇಶಕರ ಸಮಕ್ಷಮದಲ್ಲಿ ಬಹಿರಂಗ ಹರಾಜು ಮಾಡಲಾಗುವುದು.
ಹರಾಜಿನಲ್ಲಿ ಭಾಗವಹಿಸುವ ಬಿಡ್ಡುದಾರರು ಎಪಿಎಂಸಿ ಟ್ರೇಡ್ ಲೈಸೆನ್ಸ್ನೊಂದಿಗೆ ಹಾಜರಾಗಬೇಕು. ಬಿಡ್ಡುದಾರರು ಹರಾಜು ದಿನ ಒಂದು ಗಂಟೆ ಮುಂಚೆ ಬಂದು ಶೇ. 10 ರಷ್ಟು ಮೊಬಲಗನ್ನು ಮುಂಗಡ ಠೇವಣಿಯಾಗಿ ಇಡಬೇಕು. ತಪ್ಪಿದಲ್ಲಿ ಅಂತಹವರಿಗೆ ಹರಾಜಿನಲ್ಲಿ ಭಾಗವಹಿಸಲು ಅವಕಾಶವಿಲ್ಲ. ಹೆಚ್ಚಿನ ಮಾಹಿತಿಯನ್ನು ಆಹಾರ ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾರಗಳ ಇಲಾಖೆಯ ಸಹಾಯಕ ನಿರ್ದೇಶಕರ ಕಚೇರಿಯಿಂದ ಪಡೆಯಬಹುದು ಎಂದು ಜಗಳೂರು ತಾಲ್ಲೂಕು ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



