ದಾವಣಗೆರೆ: ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದಲ್ಲಿ ಇತ್ತೀಚಿಗೆ ನಡೆದ ಎಸ್ ಎಲ್ ಕೆ ಸಾಫ್ಟ್ ವೇರ್ ಸರ್ವಿಸಸ್ ಬೆಂಗಳೂರು ಕ್ಯಾಂಪಸ್ ಸಂದರ್ಶನದಲ್ಲಿ ಜಿಎಂಐಟಿ ಕಾಲೇಜಿನ 49 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ. ವೈ. ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಎರಡು ದಿನಗಳ ಈ ಸಂದರ್ಶನ ಪ್ರಕ್ರಿಯೆಯಲ್ಲಿ ವಿವಿಧ ಕಾಲೇಜುಗಳಿಂದ ಒಟ್ಟು 1400 ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು. ಕೊನೆಯದಾಗಿ ಎಲ್ಲಾ ಕಾಲೇಜುಗಳಿಂದ ಒಟ್ಟು 80 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಜಿಎಂಐಟಿ ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ.
ಇದೇ ಮೊದಲ ಬಾರಿ ಐದನೇ ಸೆಮಿಸ್ಟರ್ ವಿದ್ಯಾರ್ಥಿಗಳಿಗೂ ಸಂದರ್ಶನದಲ್ಲಿ ಪಾಲ್ಗೊಳ್ಳಲು ಅವಕಾಶವನ್ನು ಕಂಪನಿಯು ನೀಡಿತ್ತು. ಐದನೇ ಸೆಮಿಸ್ಟರ್ ನ ಒಟ್ಟು 500 ಕ್ಕೂ ಹೆಚ್ಚು ವಿದ್ಯಾರ್ಥಿಗಳು ಪಾಲ್ಗೊಂಡು, ಕೊನೆಗೆ 36 ವಿದ್ಯಾರ್ಥಿಗಳು ಆಯ್ಕೆಯಾದರು ಎಂದು ತಿಳಿಸಿದರು.
ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತಾಧಿಕಾರಿಗಳಾದ ಶ್ರೀ ವೈ ಯು ಸುಭಾಷ್ ಚಂದ್ರ, ವಿವಿಧ ವಿಭಾಗಗಳ ಮುಖ್ಯಸ್ಥರುಗಳು, ಅಧ್ಯಾಪಕ ವರ್ಗದವರು ಅಭಿನಂದಿಸಿದ್ದಾರೆ.



