ದಾವಣಗೆರೆ: ನ.24 ರಿಂದ 27ರವರೆಗೆ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಶಾಮನೂರು ಡೈಮಂಡ್‌ ಕಪ್ ಕ್ರಿಕೆಟ್‌ ಟೂರ್ನಮೆಂಟ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲಾ ಕ್ರೀಡಾಪಟುಗಳ ಸಾಂಸ್ಕೃತಿಕ ಸಂಘ ಹಾಗೂ ದಾವಣಗೆರೆ ಇಲೆವೆನ್ಸ್ ಕ್ರಿಕೆಟ್ ಕ್ಲಬ್ ಸಹಯೋಗದೊಂದಿಗೆ ಪಾರ್ವತಮ್ಮ ಶಾಮನೂರು ಶಿವಶಂಕರಪ್ಪ ಸ್ಮರಣಾರ್ಥ 15 ನೇ ವರ್ಷದ ರಾಷ್ಟ್ರ ಮಟ್ಟದ ಹೊನಲು ಬೆಳಕಿನ ಲೀಗ್ ಕಂ ನಾಕೌಟ್ ಶಾಮನೂರು ಡೈಮಂಡ್‌ ಹಾಗೂ ಶಿವಗಂಗಾ ಕಪ್-2022 ಕ್ರಿಕೆಟ್ ಟೂರ್ನಿ ಆಯೋಜಿಸಿದೆ.

ಸಂಘದ ಅಧ್ಯಕ್ಷ ದಿನೇಶ ಕೆ.ಶೆಟ್ಟಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಟೂರ್ನಿ ನ.24ರಿಂದ 27ರವರೆಗೆ ಜಿಲ್ಲಾ ಕ್ರೀಡಾಂಗಣದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಬೆಂಗಳೂರು, ಮೈಸೂರು, ಮಂಗಳೂರು, ಉಡುಪಿ, ತುಮಕೂರು, ಶಿವಮೊಗ್ಗ, ಹುಬ್ಬಳ್ಳಿಯಿಂದ, ಅಲ್ಲದೇ ಕೇರಳ, ತಮಿಳುನಾಡು, ಮಧ್ಯಪ್ರದೇಶ, ಮಹಾರಾಷ್ಟ್ರದಿಂದ ಒಟ್ಟು 32 ತಂಡಗಳ 360 ಆಟಗಾರರು ಭಾಗವಹಿಸಲಿದ್ದಾರೆ.

ವಿಜೇತರಾದವರಿಗೆ ಪ್ರಥಮ ಬಹುಮಾನ 4,05,555 ರೂ, ಶಾಮನೂರು ಡೈಮಂಡ್ ಕಪ್ ದ್ವಿತೀಯ ಸ್ಥಾನಕ್ಕೆ 3,05,555 ರೂ, ಶಿವಗಂಗಾ ಕಪ್ ತೃತೀಯ ಬಹುಮಾನ 1,25,555 ರೂ. ಹಾಗೂ ಆಕರ್ಷಕ ಟ್ರೋಫಿ ನೀಡಲಾಗುವುದು ಎಂದು ತಿಳಿಸಿದರು.

ಉತ್ತಮ ಆಲ್‌ರೌಂಡರ್‌ಗೆ ವೈಯಕ್ತಿಕ ಬಹುಮಾನವಾಗಿ ಹೀರೋ ಹೊಂಡಾ ಬೈಕ್ ನೀಡಲಾಗುವುದು ಎಂದು ಹೇಳಿದರು. ಪಂದ್ಯಗಳನ್ನು ವೀಕ್ಷಿಸಲು ಕ್ರೀಡಾಭಿಮಾನಿಗಳಿಗೆ ಮೈದಾನದಲ್ಲಿ ಗ್ಯಾಲರಿ ವ್ಯವಸ್ಥೆ ಮಾಡಲಾಗುವುದು. ಮೂರನೇ ತೀರ್ಪುಗಾರರು ಇರಲಿದ್ದು ಎಲ್ಲ ಪಂದ್ಯಗಳನ್ನು ಯೂ ಟ್ಯೂಬ್‌ನಲ್ಲಿ ನೇರ ಪ್ರಸಾರ ಮಾಡಲಾಗುವುದು ಎಂದು ವಿವರಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *