ದಾವಣಗೆರೆ: ಕಣ್ಣಿಗೆ ಕಾರದ ಪುಡಿ ಎರಚಿ; ಒನಕೆಯಿಂದ ಹೊಡೆದು ವೃದ್ಧ ಮಾವನನ್ನು ಕೊಂದ ಸೊಸೆ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಸೊಸೆಯೊಬ್ಬಳು ವೃದ್ಧ ಮಾವನ ಮೈ‌ಮೇಲೆ ಬಿಸಿ ನೀರು ಸುರಿದು,ಕಾರದಪುಡಿ ಎರಚಿ ಒನಕೆಯಿಂದ ಹೊಡೆದು ಕೊಂದಿರುವ ಘಟನೆ ಜಿಲ್ಲೆಯ ಹರಿಹರದ ವಿದ್ಯಾನಗರದಲ್ಲಿ ನಡೆದಿದೆ.

ಕಿರುಕುಳ ನೀಡುತ್ತಿದ್ದರೆಂದು ಆರೋಪಿಸಿ ಹರಿಹರದ ವಿದ್ಯಾನಗರದಲ್ಲಿ ವಾಸವಿದ್ದ ಜ್ಯೋತಿ ಎಂಬ ಮಹಿಳೆ, ಗಂಡ ಕೆಲಸಕ್ಕೆ ಹೋಗಿದ್ದ ವೇಳೆ ಈ ಕೃತ್ಯ ನಡೆಸಿದ್ದಾರೆ. ಮಂಚದ ಮೇಲೆ ಮಲಗಿದ್ದ ಮಾವ ಶಿವಕುಮಾರ (70) ಮೇಲೆ ಬಿಸಿ ನೀರು ಸುರಿದು ಕಾರದ ಪುಡಿ ಎರಚಿ ವೇಲ್ ನಿಂದ ಕಟ್ಟಿ ಹಾಕಿ ಒನಕೆಯಿಂದ ಹೊಡೆದು ಕೊಂದು ಹಾಕಿದ್ದಾರೆ. ಕೆಲಸಕ್ಕೆ ಹೋಗಿದ್ದ ಜ್ಯೋತಿ ಗಂಡ ವೀರೇಶ್ ಗೆ ಮನೆಯ ಅಕ್ಕಪಕ್ಕದವರು ಮಾಹಿತಿ ನೀಡಿದ್ದಾರೆ. ಕೂಡಲೇ ಮನೆಗೆ ಬಂದು ನೋಡಿದ್ದಾಗ ತಂದೆ ಶಿವಕುಮಾರ್ ಸಾವನ್ನಪ್ಪಿದ್ದರು.

ಮೈಯಲ್ಲಿ ಸುಟ್ಟ ಗಾಯಗಳು, ಕಾರದ ಪುಡಿ, ವೇಲ್ , ಒನಕೆ ಇತ್ತು ಎಂದು ಹರಿಹರ ನಗರ ಠಾಣೆಯಲ್ಲಿ ವೀರೇಶ್ ದೂರು ದಾಖಲಿಸಿದ್ದಾರೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ. ದೂರಿನ ಆಧಾರದ ಮೇಲೆ ಜ್ಯೋತಿಯನ್ನು ಪೊಲೀಸರು ವಶಕ್ಕೆ ಪಡೆದಿದ್ದು, ವಿಚಾರಣೆ ನಡೆಯುತ್ತಿದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *