ದಾವಣಗೆರೆ: ಜಿಲ್ಲಾ ಕೈಗಾರಿಕಾ ಕೇಂದ್ರದಿಂದ ನಾಳೆ( ನವಂಬರ್ 9) ಸಂಜೆ 4 ಗಂಟೆಗೆ ನಗರದ ಓಷಿಯನ್ ಪಾರ್ಕ್ ಸಭಾಂಗಣದಲ್ಲಿ “ನೂತನ ಜವಳಿ ಮತ್ತು ಸಿದ್ಧ ಉಡುಪು ನೀತಿ-2019-24 , “ಎಂ.ಎಸ್.ಇ.ಎಫ್.ಸಿ ಮತ್ತು ಒಂದು ಜಿಲ್ಲೆ ಒಂದು ಉತ್ಪನ್ನ” ಮತ್ತು “ಜಿ.ಎಸ್.ಟಿ ಯಲ್ಲಿನ ಈ-ಇನ್ವಾಯ್ಸಿಂಗ್ ಮತ್ತು ಇತ್ತೀಚಿನ ತಿದ್ದುಪಡಿಗಳ” ಕುರಿತು ಅರಿವು ಮೂಡಿಸುವ ಕಾರ್ಯಕ್ರಮ ಏರ್ಪಡಿಸಲಾಗಿದೆ.
ಜಿಲ್ಲಾಧಿಕಾರಿ ಶಿವಾನಂದ ಕಾಪಸಿ ಅರಿವು ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಕಾಸಿಯಾದ ಕೆ.ಎನ್,ನರಸಿಂಹಮೂರ್ತಿ ಅಧ್ಯಕ್ಷತೆ ವಹಿಸಲಿದ್ದಾರೆ. ಮುಖ್ಯ ಅತಿಥಿಗಳಾಗಿ ಜಿ.ಪಂ.ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಡಾ.ಎ ಚೆನ್ನಪ್ಪ, ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ಅಪರ ನಿರ್ದೇಶಕ ಹೆಚ್.ಎಂ ಶ್ರೀನಿವಾಸ, ವಾಣಿಜ್ಯ ತೆರಿಗೆಗಳ ಇಲಾಖೆಯ ಉಪ ಆಯುಕ್ತ ಪರಮೇಶ್ವರ ಗೌಡ, ಜಿಲ್ಲಾ ಕೈಗಾರಿಕಾ ಕೇಂದ್ರದ ಜಂಟಿ ನಿರ್ದೇಶಕ ಡಿ.ಕೆ.ಲಿಂಗರಾಜು, ಕೃಷಿ ಇಲಾಖೆ ಜಂಟಿ ನಿರ್ದೇಶಕ ಶ್ರೀನಿವಾಸ ಚಿಂತಾಲ್, ಕೈಮಗ್ಗ ಮತ್ತು ಜವಳಿ ಇಲಾಖೆಯ ಸುರೇಶ್.ಎನ್.ತಡಕನಹಳ್ಳಿ, ಲೀಡ್ ಬ್ಯಾಂಕ್ನ ವಿಭಾಗೀಯ ಪ್ರಬಂಧಕ ಜಿ.ಜಿ.ದೊಡ್ಡಮನಿ ಪಾಲ್ಗೊಳ್ಳಲಿದ್ದಾರೆ.



