ದಾವಣಗೆರೆ: ರೈತರು, ಸಹಕಾರಿ ಕುಟುಂಬಗಳಿಗೆ ಅನುಕೂಲ ಕಲ್ಪಿಸಲು ಸರ್ಕಾರ ಯಶಸ್ವಿನಿ ಯೋಜನೆಯನ್ನು ಮರು ಜಾರಿಗೊಳಿಸಿ ಆದೇಶ ಹೊರಡಿಸಿದ್ದು, ನ.1 ರಿಂದ ಯಶಸ್ವಿನಿ ಆರೋಗ್ಯ ವಿಮೆಯ ನೋಂದಣಿ ಆರಂಭವಾಗಲಿದೆ.
ಸಹಕಾರ ಇಲಾಖೆಯು 2022-23 ನೇ ಸಾಲಿಗೆ ಸಹಕಾರಿಗಳಿಗಾಗಿ ಯಶಸ್ವಿನಿ ಆರೋಗ್ಯ ರಕ್ಷಣಾ ಯೋಜನೆಯನ್ನು ಜಾರಿಗೊಳಿಸುತ್ತಿದ್ದು, ಹೊಸ ಸದಸ್ಯರ ನೋಂದಣಿ ಪ್ರಕ್ರಿಯೆ ಪ್ರಾರಂಭಿಸಿದೆ. ನವೆಂಬರ್ 14 ರ ರೊಳಗಾಗಿ ಅರ್ಹರು ನೋಂದಣಿ ಮಾಡಿಕೊಳ್ಳಬಹುದಾಗಿದೆ ಎಂದು ಸಹಕಾರ ಸಂಘಗಳ ಉಪನಿಬಂಧಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಗ್ರಾಮೀಣ ಸಹಕಾರ ಸಂಘಗಳ, ಸ್ವ-ಸಹಾಯ ಗುಂಪುಗಳ ಗರಿಷ್ಟ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ವಾರ್ಷಿಕ ರೂ.500/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.100/-ಗಳನ್ನು ಪಾವತಿಸಬೇಕು. ನಗರ ಸಹಕಾರ ಸಂಘಗಳ ಗರಿಷ್ಠ ನಾಲ್ಕು ಸದಸ್ಯರ ಕುಟುಂಬ ಒಂದಕ್ಕೆ ರೂ.1,000/- ಗಳ ವಂತಿಗೆ ಮತ್ತು ಹೆಚ್ಚುವರಿ ಪ್ರತಿಯೊಬ್ಬ ಸದಸ್ಯರಿಗೆ ರೂ.200/- ಗಳನ್ನು ಪಾವತಿಸಬೇಕು. ಸದಸ್ಯರ ಆಧಾರ ಕಾರ್ಡ್ ನಕಲಿ ಪ್ರತಿ ಹಾಗೂ ಎರಡು ಫೋಟೋ ಗಳ ದಾಖಲೆ ಸಲ್ಲಿಸಬೇಕು.
ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಸದಸ್ಯರಿಗೆ ವಿಶೇಷ ಘಟಕ ಯೋಜನೆ ಹಾಗೂ ಗಿರಿಜನ ಉಪ ಯೋಜನೆಯಡಿ ಸಹಾಯಧನ ನೀಡುವ ಮೂಲಕ ಅವರ ವಾರ್ಷಿಕ ಸದಸ್ಯತ್ವದ ವಂತಿಗೆಯನ್ನು ಸರ್ಕಾರವೇ ಭರಿಸುತ್ತದೆ.
ರಾಜ್ಯ ಸರ್ಕಾರದ ಯಶಸ್ವಿನಿ ಯೋಜಸೌಲಭ್ಯ; ರಿ 1 ರಿಂದ ಜಾರಿಗೆ ಬರಲಿದ್ದು, ರಾಜ್ಯದ ಸಹಕಾರ ಸಂಘಗಳ ಸದಸ್ಯರು ಹಾಗೂ ರೈತ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ಲಾಭ ದೊರೆಯಲಿದೆ.ರಾಜ್ಯದ ಸಹಕಾರಿ ಸಂಘದ ಸದಸ್ಯರು ತಮ್ಮ ಸಹಕಾರಿ ಸಂಘಗಳ ಮೂಲಕ ನಿಗದಿತ ಶುಲ್ಕ ಪಾವತಿಸಿ ನೋಂದಣಿ ಮಾಡಿಕೊಳ್ಳಬೇಕು.
ನೋಂದಣಿ ಮಾಡಿಕೊಂಡ ನಂತರ ಸಹಕಾರಿಗಳು ಮತ್ತು ಅವರ ಕುಟುಂಬ ಸದಸ್ಯರಿಗೆ ಯಶಸ್ವಿನಿ ಯೋಜನೆಯ ವ್ಯಾಪ್ತಿಗೆ ಒಳಪಡುವ ಯಾವುದೇ ಆಸ್ಪತ್ರೆಯಲ್ಲಿ ವಾರ್ಷಿಕ ಗರಿಷ್ಠ 5 ಲಕ್ಷ ರೂ.ವರೆಗೆ ಚಿಕಿತ್ಸೆ ಪಡೆಯಬಹುದು. ಸದಸ್ಯರಿಗೆ 2023 ರ ಜನವರಿ 1 ರಿಂದ ಡಿಸೆಂಬರ್ 31 ರವರೆಗೆ ಜಾರಿಯಲ್ಲಿರುತ್ತದೆ. ಈ ಅವಧಿ ನಂತರ ಮತ್ತೆ ಶುಲ್ಕ ಪಾವತಿಸಿ ನೋಂದಣಿ ಮಾಡಮಾಡಿಕೊಳ್ಳಬೇಕಾಗಿದೆ.



