ದಾವಣಗೆರೆ: ಸಹಕಾರ ಬ್ಯಾಂಕ್ ಗಳಿಗೆ ಮುಖ್ಯ ಮಾಹಿತಿ; ಲೆಕ್ಕಪರಿಶೋಧಕರನ್ನು ನೇಮಿಸಿಕೊಳ್ಳಲು ಗಡುವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಜಿಲ್ಲೆಯ ಬಹುಪಾಲು ಸಹಕಾರ ಸಂಘಗಳು ಮತ್ತು ಸೌಹರ್ಧ ಸಹಕಾರಿಗಳು ಲೆಕ್ಕಪರಿಶೋಧಕರ/ಲೆಕ್ಕಪರಿಶೋಧನಾ ಫರ್ಮಿನ ನೇಮಕಾತಿ ಬಗ್ಗೆ ಕಚೇರಿಗೆ ಮಾಹಿತಿ ನೀಡಿರುವುದಿಲ್ಲ. ಮಾಹಿತಿಯನ್ನು ಸಲ್ಲಿಸದ ಸಹಕಾರ ಸಂಘಗಳು ಈ ಪ್ರಕಟಣೆಯ ದಿನಾಂಕದಿಂದ 03 ದಿನಗಳೊಗಾಗಿ ವಾರ್ಷಿಕ ಮಹಾಸಭೆಯಲ್ಲಿ ನೇಮಕಾತಿ ಮಾಡಿಕೊಂಡಿರುವ ಬಗ್ಗೆ ಮಾಹಿತಿಯನ್ನು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆ, ಉಪನಿರ್ದೇಶಕ ಕಚೇರಿ ಜನತಾಬಜಾರ್ ಕಟ್ಟಡ, ಪಿ.ಜೆ.ಬಡಾವಣೆ ದಾವಣಗೆರೆ ಕಚೇರಿಗೆ ಸಲ್ಲಿಸುವುದು. ಇಲ್ಲವಾದಲ್ಲಿ ಈ ಸಂಘಗಳಿಗೆ ಇಲಾಖೆಯಿಂದ ಲೆಕ್ಕಪರಿಶೋಧಕರನ್ನು ನೇಮಿಸಲಾಗುವುದೆಂದು ಪರಿಗಣಿಸಬೇಕಾಗುತ್ತದೆ ಎಂದು ಸಹಕಾರ ಸಂಘಗಳ ಲೆಕ್ಕಪರಿಶೋಧನಾ ಇಲಾಖೆಯ ಉಪ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಸೌಹರ್ಧ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯಲ್ಲಿ ಲೆಕ್ಕಪರಿಶೋಧಕರ ಅಥವಾ ಲೆಕ್ಕಪರಿಶೋಧನಾ ಫರ್ಮ್‌ ನೇಮಕ ಮಾಡಿಕೊಂಡಿರುವ ಬಗ್ಗೆ ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ಮಾಹಿತಿ ಒದಗಿಸಲು ಸೂಚಿಸಲಾಗಿದೆ. ಕರ್ನಾಟಕ ಸಹಕಾರ ಸಂಘಗಳ ನಿಯಮಗಳು 1960 ನಿಯಮ 29-ಬಿ(8) ರನ್ವಯ ಯಾವುದೇ ಸಹಕಾರ ಸಂಘದ ಮುಖ್ಯ ಕಾರ್ಯನಿರ್ವಾಹಕರು ಹಾಗೂ ಕರ್ನಾಟಕ ಸೌಹಾರ್ದ ಸಹಕಾರ ನಿಯಮಗಳು 2004 ನಿಯಮ 8-ಬಿ(8)ರನ್ವಯ ಯಾವುದೇ ಸೌಹಾರ್ದ ಸಹಕಾರಿಯ ಮುಖ್ಯ ಕಾರ್ಯನಿರ್ವಾಹಕರು ವಾರ್ಷಿಕ ಮಹಾಸಭೆಯ ದಿನಾಂಕದಿಂದ 07 ದಿನಗಳೊಳಗಾಗಿ ಲೆಕ್ಕಪರಿಶೋಧಕರಿಗೆ/ಲೆಕ್ಕಪರಿಶೋಧನಾ ಫರ್ಮಿಗೆ ಮತ್ತು ಸಹಕಾರಿ ಲೆಕ್ಕಪರಿಶೋಧನಾ ನಿರ್ದೇಶಕರಿಗೆ ತಿಳಿಸಬೇಕಾಗಿರುತ್ತದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *