ದಾವಣಗೆರೆ: ಗ್ಯಾಸ್ ಸಿಲಿಂಡರ್ ರೀಫಿಲ್ಲಿಂಗ್ ವೇಳೆ ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ. ಘಟನೆಯಲ್ಲಿ ತಂದೆ-ಮಗನಿಗೆ ಗಾಯಗಳಾಗಿದ್ದು, ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ದಾವಣಗೆರೆ ನಗರದ ಹೆಚ್.ಕೆ.ಆರ್ ವೃತ್ತದ ಬಳಿಯ ಮನೆಯೊಂದರಲ್ಲಿ ಈ ಘಟನೆ ನಡೆದಿದೆ. ಆಟೋ ಚಾಲಕ ಸುರೇಶ ಬಾಬು (50) ಹಾಗೂ ಪ್ರತೀಕ್ (11) ಗಾಯಗೊಂಡ ತಂದೆ-ಮಗ. ಸ್ಥಳಕ್ಕೆ ಭೇಟಿ ನೀಡಿದ ಅಗ್ನಿ ಶಾಮಕದಳದ ಸಿಬ್ಬಂದಿ ಗಾಯಾಳುಗಳನ್ನು ಜಿಲ್ಲಾಸ್ಪತ್ರೆಗೆ ದಾಖಲಿಸಿದ್ದಾರೆ. ಸುರೇಶ್ ಬಾಬು ಆಟೋ ಚಾಲಕನಾಗಿಸದ್ದು, ಆಟೋ ಗ್ಯಾಸ್ ಖಾಲಿಯಾದ ಕಾರಣ ಸಣ್ಣ ಸಿಲಿಂಡರ್ ಗೆ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದರು. ಈ ಸಂದರ್ಭದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹೊತ್ತಿಕೊಂಡಿದೆ.
ಗ್ಯಾಸ್ ರೀಫಿಲ್ಲಿಂಗ್ ಮಾಡುವುದು ನಿಷೇಧವಿದ್ದರೂ, ಕೆಲ ಆಟೋ ಚಾಲಕರು ಅಕ್ರಮವಾಗಿ ರೀಫಿಲ್ಲಿಂಗ್ ಮಾಡಿಕೊಳ್ಳುವುದರಿಂದ ಇಂತಹ ಅವಘಡಗಳು ನಡೆಯುತ್ತಿವೆ.



