Connect with us

Dvgsuddi Kannada | online news portal | Kannada news online

ದಾವಣಗೆರೆ: ಬೈಕಿಗೆ ಲಾರಿ ಡಿಕ್ಕಿ; ಯುವ ರೈತ ಸಾವು

death

ಜಗಳೂರು

ದಾವಣಗೆರೆ: ಬೈಕಿಗೆ ಲಾರಿ ಡಿಕ್ಕಿ; ಯುವ ರೈತ ಸಾವು

ದಾವಣಗೆರೆ: ವಿಂಡ್​ ಫ್ಯಾನ್​ ಕಂಪನಿಗೆ ಸೇರಿದ ಲಾರಿ ಡಿಕ್ಕಿ, ರೈತ ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಜಗಳೂರು ತಾಲೂಕಿನ ಬುಳ್ಳನಳ್ಳಿ ಬಳಿ ನಡೆದಿದೆ. ಲಾರಿ ಡಿಕ್ಕಿಯಾಗಿ ಬೈಕ್​ನಲ್ಲಿ ತೆರಳ್ತಿದ್ದ ಯುವ ರೈತ ಮೂರ್ತ್ಯಪ್ಪ(36) ಮೃತಪಟ್ಟಿದ್ದಾರೆ.

ಬೈಕ್​ನಲ್ಲಿ ರೈತ ಮೂರ್ತ್ಯಪ್ಪ ಜಮೀನಿಗೆ ತೆರಳುತ್ತಿದ್ದ ವೇಳೆ ಅಪಘಾತ ಸಂಭವಿಸಿದೆ. ಮಣ್ಣು ಸಾಗಣೆ ಮಾಡುತ್ತಿದ್ದ ವಿಂಡ್​ ಫ್ಯಾನ್ ಕಂಪನಿಗೆ ಸೇರಿದ ಲಾರಿ, ರೈತನಿಗೆ ಡಿಕ್ಕಿ ಹೊಡೆದಿದೆ. ಜಗಳೂರು ತಾಲೂಕಿನಲ್ಲಿ ವಿಂಡ್ ಫ್ಯಾನ್ ಕಂಪನಿ ಲಾರಿಗಳ ಹಾವಳಿ ಹೆಚ್ಚಾಗಿದೆ ಎಂದು ಗ್ರಾಮಸ್ಥರು ದೂರು ನೀಡಿದ್ದಾರೆ, ಆದರೆ ಈ ಬಗ್ಗೆ ಯಾವುದೇ ಕ್ರಮ ಕೈಗೊಂಡಿಲ್ಲ.ಮಣ್ಣು ಸಾಗಣೆಗೆ ಪ್ರತಿ‌ ತಿಂಗಳು ನೂರಾರು ಲಾರಿಗಳು ಸಂಚಾರ ಮಾಡುತ್ತಿದೆ. ಜಗಳೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ. ಈ ಪ್ರಕರಣದ ಬಗ್ಗೆ ಜಗಳೂರು ಪೊಲೀಸ್ ದೂರು ದಾಖಲಿಸಿಕೊಂಡಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಜಗಳೂರು

To Top