ಚಳಿಗೆ ಜನರು ಕೈಗೊಳ್ಳಬೇಕಾದ ಮುನ್ನೆಚ್ಚರಿಕೆ ಕ್ರಮದ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ರಾಜ್ಯದಲ್ಲಿ ಕಳೆದ ಮೂರು-ನಾಲ್ಕು ದಿನದಿಂದ ಚಳಿ ಗಾಳಿ, ಮಳೆಯಾಗುತ್ತಿದೆ. ಇದರಿಂದ ಮೈ ನಡುಗಿಸುವ ಚಳಿಗೆ ಜನರು ತತ್ತರಿಸಿ ಹೋಗಿದ್ದಾರೆ. ಜನರಲ್ಲಿ ಅನಾರೋಗ್ಯ ಸಮಸ್ಯೆ ಎದುರಿಸುವಂತಾಗಿದೆ. ಮಕ್ಕಳಲ್ಲಿ ಹೆಚ್ಚಾಗಿ ಕೆಮ್ಮು, ಜ್ವರ, ನೆಗಡಿ ಕಾಣಿಸಿಕೊಳ್ಳುತ್ತಿದೆ. ಹೀಗಾಗಿ ಚಳಿಯ ವಾತಾವರಣಕ್ಕೆ ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

ಮಾಂಡೌಸ್‌ ಚಂಡಮಾರುತದಿಂದಾಗಿ ರಾಜ್ಯದಲ್ಲಿ ವರುಣನ ಆರ್ಭಟ ಹೆಚ್ಚಾಗಿದೆ. ಮೈ ಕೊರೆಯುವ ಚಳಿ ಶುರುವಾಗಿದೆ. ಇದರಿಂದ ಎದುರಾಗುವ ಆರೋಗ್ಯ ಸಮಸ್ಯೆಯಿಂದ ದೂರ ಇರಲು ಆರೋಗ್ಯ ಇಲಾಖೆ ಮಾರ್ಗಸೂಚಿ ಹೊರಡಿಸಿದೆ. ಸುಲಭವಾಗಿ ಜೀರ್ಣವಾಗುವ, ಬಿಸಿಬಿಸಿ ಆಹಾರ ಸೇವಿಸಬೇಕು. ಯಾವಾಗಲೂ ಸ್ವೆಟರ್‌, ಸಾಕ್ಸ್‌ ಧರಿಸಬೇಕು. ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ ಎಂದು ಸೂಚಿಸಿದೆ.

ಮುಂಬರುವ ಚಳಗಾಲದ ದಿನಗಳಲ್ಲಿ ಸಾರ್ವಜನಿಕರು, ಮಕ್ಕಳು ( ನವಜಾತ ಶಿಶುಗಳು ಸೇರಿದಂತೆ), ಗರ್ಭಿಣಿಯರು, ವೃದ್ಧರು, ವಿಶೇಷವಾಗಿ ಇತರೆ ಆರೋಗ್ಯ ಸಮಸ್ಯೆಗಳಿಂದ ಬಳಲುತ್ತಿರುವವರು ಈ ಕೆಳಗಿನ ಸಲಹೆಗಳನ್ನು ಪಾಲಿಸಲು ಸೂಚಿಸಿದೆ.

  • ಯಾವಾಗಲೂ ಬೆಚ್ಚಗಿನ ನೀರು ಕುಡಿಯುವುದು
  • ಸುಲಭವಾಗಿ ಜೀರ್ಣವಾಗುವ ಹಾಗೂ ಆಗತಾನೆ ತಯಾರಿಸಿದ ಆಹಾರ ಪದಾರ್ಥಗಳನ್ನು ಸೇವಿಸುವುದು
  • ಯಾವಾಗಲೂ sweater, ಸಾಕ್ಸ್ ಹಾಗೂ ಕೈಗವಸುಗಳನ್ನು ಧರಿಸುವುದು ಹಾಗೂ ಮನೆಯ ಒಳಗಿರುವಾಗಲೂ ಬೆಚ್ಚಗಿರುವುದು ಉತ್ತಮ
  • ಸ್ನಾನಕ್ಕೆ ಬಿಸಿ ನೀರು / ಬೆಚ್ಚಗಿನ ನೀರನ್ನು ಉಪಯೋಗಿಸುವುದು
  • ಅನಗತ್ಯವಾಗಿ ಹೊರ ಸಂಚಾರವನ್ನು ತಪ್ಪಿಸಿ
    ಕಿವಿಗಳನ್ನು ಹತ್ತಿಯಿಂದ ಮುಚ್ಚಿಕೊಳ್ಳಿ ಅಥವಾ ಸ್ಕಾರ್ಫ್ ಕಟ್ಟಕೊಳ್ಳ ಹಾಗೂ ಹೋಗಲೇಬೇಕಾದಲ್ಲಿ ಮಾಸ್ಕ್ ಧರಿಸಬೇಕು
  • ನೆಗಡಿ, ಕೆಮ್ಮು ಹಾಗೂ ಜ್ವರದ ಲಕ್ಷಣಗಳರುವರಿಂದ ದೂರವಿರಬೇಕು
    ಮೊಣಕೈ ಒಳಗೆ ಸೀನುವುದು, ಕೆಮ್ಮುವುದು, ಅಥವಾ ಸೀನುವಾಗ, ಕೆಮ್ಮುವಾಗ ಟಿಶ್ಯೂ ಅಥವಾ ಕರವಸ್ತ್ರವನ್ನು ಬಳಸಬೇಕು
  • ಕೈಗಳನ್ನು ಆಗಾಗ್ಗೆ ನೀರು ಹಾಗೂ ಸೋಪಿನಿಂದ ತೊಳೆಯಬೇಕು
    ಜ್ವರ‌ ಲಕ್ಷಣಗಳು ಅಥವಾ ಇತರೆ ಯಾವುದಾದರೂ ಖಾಯಿಲೆಯ ಲಕ್ಷಣಗಳಿದ್ದಲ್ಲಿ ತಕ್ಷಣವೇ ವೈದ್ಯರ ಸಲಹೆಯನ್ನು ಪಡೆಯುವುದು
  • ಸ್ವಯಂವೈದ್ಯ ಪದ್ಧತಿಗಳನ್ನು ಅನುಸರಿಸಬಾರದು
  • ತಣ್ಣಗಿನ ಪಾನೀಯಗಳು , ಐಸ್ ಕ್ರೀಂಗಳನ್ನು ಸೇವಿಸಬಾರದು
  • ರೆಫ್ರಿಜರೇಟರ್‌ನ ಅಥವಾ ತಣ್ಣಗಿನ ನೀರನ್ನು ಕುಡಿಯಬಾರದು
  • ಮಳೆಯಲ್ಲಿ ನೆನೆಯುವುದನ್ನು ಹಾಗೂ ತಣ್ಣನೆಯ ಶೀತ ಗಾಳಿಗೆ ಮೈ ಒಡ್ಡುವುದನ್ನು ತಪ್ಪಿಸಬೇಕು
  • ಹೊರಾಂಗಣ ಪ್ರವಾಸಗಳನ್ನು ಆದಷ್ಟು ನಿರ್ಭಂಧಿಸಿ ( ವಿಶೇಷವಾಗಿ ಗಿರಿಧಾಮಗಳಿಗೆ ವಾರಾಂತ್ಯದ ಪ್ರವಾಸ ಹೋಗುವುದು ಇತ್ಯಾದಿ)
  • ಮಸಾಲಾಯುಕ್ತ ಪದಾರ್ಥಗಳು / ಜಂಕ್ ಫುಡ್‌ಗಳನ್ನು ಸೇವಿಸಬಾರದು ಎಂದು ಆರೋಗ್ಯ ಇಲಾಖೆ ಮಾರ್ಗಸೂಚಿ ಬಿಡುಗಡೆ ಮಾಡಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *