Connect with us

Dvgsuddi Kannada | online news portal | Kannada news online

ಜ.10, 11ರಂದು ಹಂಪಿ ಉತ್ಸವ

ಪ್ರಮುಖ ಸುದ್ದಿ

ಜ.10, 11ರಂದು ಹಂಪಿ ಉತ್ಸವ

ಡಿವಿಜಿ ಸುದ್ದಿ, ಬಳ್ಳಾರಿ: ಜ.10 ಮತ್ತು 11ರಂದು  ಹಂಪಿ ಉತ್ಸವ ನಡೆಯಲಿದ್ದು, ಉತ್ಸವಕ್ಕೆ ಸಿದ್ಧತೆಗೆ ರಚಿಸಲಾಗಿರುವ ವಿವಿಧ ಸಮಿತಿಗಳ ಕಾರ್ಯಗಳನ್ನು ಜಿಲ್ಲಾಧಿಕಾರಿ ಎಸ್.ಎಸ್.ನಕುಲ್ ಪರಿಶೀಲಿಸಿದರು.

ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಹಂಪಿ ಉತ್ಸವಕ್ಕೆ ಸಂಬಂಧಿಸಿದ ಸಿದ್ಧತಾ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಹಂಪಿ ಉತ್ಸವ ಜನರ ಉತ್ಸವವನ್ನಾಗಿಸುವ ನಿಟ್ಟಿನಲ್ಲಿ ಪರಿಣಾಮಕಾರಿಯಾಗಿ ಕೆಲಸ ನಿರ್ವಹಿಸಬೇಕು. ತಮಗೆ ವಹಿಸಿದ ಜವಾಬ್ದಾರಿಗಳನ್ನು ಅಚ್ಚುಕಟ್ಟಾಗಿ ನಿರ್ವಹಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.

bellry dc

ಮುಖ್ಯಮಂತ್ರಿಗಳು ಉತ್ಸವದ ಉದ್ಘಾಟನೆ ಮಾಡಲಿದ್ದು, ಡಿಸಿಎಂ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಲಕ್ಷ್ಮಣ ಸವದಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಚಿವ ಸಿ.ಟಿ.ರವಿ ಸೇರಿದಂತೆ ಅನೇಕ ಸಚಿವರು ಹಾಗೂ ಶಾಸಕರು ಅತಿಥಿಗಳಾಗಿ ಆಗಮಿಸಲಿದ್ದಾರೆ. ಛಾಯಾಚಿತ್ರ, ಕ್ರೀಡೆ, ಮಳಿಗೆಗಳು, ಚಿತ್ರಕಲೆ, ಶಿಲ್ಪಕಲೆ ಸೇರಿದಂತೆ ವಿವಿಧ ರೀತಿಯ ಸ್ಪರ್ಧಾ ಕಾರ್ಯಕ್ರಮಗಳ ಅರ್ಜಿ ಆಹ್ವಾನಿಸಿ, ಕೂಡಲೇ ಪತ್ರಿಕಾ ಪ್ರಕಟಣೆ ನೀಡುವುದರ ಮೂಲಕ ಪ್ರಚುರಪಡಿಸಿ ಎಂದರು.

ನಾಲ್ಕು ವೇದಿಕೆ:ಗಾಯತ್ರಿ ಪೀಠದ ಹತ್ತಿರ ನಿರ್ಮಿಸಲಾಗುವ ಶ್ರೀ ಕೃಷ್ಣದೇವರಾಯ ವೇದಿಕೆ, ಎದುರು ಬಸವಣ್ಣ, ವಿರೂಪಾಕ್ಷೇಶ್ವರ ದೇವಸ್ಥಾನ ವೇದಿಕೆ, ಕಡಲೆಕಾಳು ಗಣಪತಿ ಎಂಬ ನಾಲ್ಕು ವೇದಿಕೆಗಳನ್ನು ಸ್ಥಾಪಿಸಲಾಗಿದ್ದು, ಈ ನಾಲ್ಕು ವೇದಿಕೆಗಳಿಗೆ ಉಸ್ತುವಾರಿ ವಹಿಸಿ ನೋಡಲ್ ಅಧಿಕಾರಿಗಳನ್ನು ನೇಮಿಸಲಾಗಿದೆ. ನೋಡಲ್ ಅಧಿಕಾರಿಗಳು ಟ್ರೋಫಿ, ಪ್ರಮಾಣ ಪತ್ರಗಳು ಎಷ್ಟು ಬೇಕು ಎಂಬುದರ ಅಂಕಿ-ಸಂಖ್ಯೆಯ ವಿವರ ಒದಗಿಸಬೇಕು ಎಂದು ಸೂಚಿಸಿದರು.

ತುಂಗಾರತಿ ಮಹೋತ್ಸವಕ್ಕೆ ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ, ವಸಂತ ವೈಭವ ಹೊಸಪೇಟೆಯ ವಡಕರಾಯ ದೇವಸ್ಥಾನದಿಂದ ಆರಂಭವಾಗಿ ಕ್ರೀಡಾಂಗಣದವರೆಗೆ ಮಹೋತ್ಸವ ನಡೆಯಲಿದ್ದು, ಉಪಮುಖ್ಯಮಂತ್ರಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಲಕ್ಷ್ಮಣ ಸವದಿ ಚಾಲನೆ ನೀಡಲಿದ್ದಾರೆ. ನೂರಾರು ಕಲಾತಂಡಗಳು ಹಾಗೂ ಸಾವಿರಾರು ಜನರು ಈ ವೈಭವದಲ್ಲಿ ಪಾಲ್ಗೊಳ್ಳಲಿದ್ದಾರೆ ಎಂದರು.

ಧ್ವನಿ ಬೆಳಕಿನ ವೈಭವ:ಲೋಟಸ್ ಮಹಲ್ ಹತ್ತಿರದ ಆನೆ ಸಾಲುಮಂಟಪದ ಬಳಿ ಈ ಬಾರಿ ಧ್ವನಿ ಮತ್ತು ಬೆಳಕಿನಲ್ಲಿ ಕರ್ನಾಟಕ ವೈಭವ ಅನಾವರಣಗೊಳ್ಳಲಿದೆ. ಇದಕ್ಕೆ ಬೇಕಾದ ಖುರ್ಚಿಗಳ ವ್ಯವಸ್ಥೆ ಸೇರಿ ಇನ್ನೀತರ ಅಗತ್ಯ ಸಿದ್ಧತೆಗಳನ್ನು ಮಾಡಿಕೊಳ್ಳುವಂತೆ ಡಿಸಿ ನಕುಲ್ ಅವರು ಸೂಚಿಸಿದರು.

ಶಿಲಾಶಿಲ್ಪ ಶಿಬಿರ, ಚಿತ್ರಕಲಾ ಶಿಬಿರ, ಆಗಸದಲ್ಲಿ ಹಂಪಿ, ಮತ್ಸ್ಯ ಮೇಳ, ಛಾಯಾಚಿತ್ರ ಸ್ಪರ್ಧೆ, ಸಾಹಸ ಕ್ರೀಡೆಗಳು, ವಿಚಾರ ಸಂಕಿರಣ, ಕ್ರೀಡೆಗಳು, ಆಹಾರ ಮೇಳ, ಫಲಪುಷ್ಪ ಪ್ರದರ್ಶನ, ಪುಸ್ತಕ ಪ್ರದರ್ಶನ, ರಂಗೋಲಿ, ಮೆಹಂದಿ ಸ್ಪರ್ಧೆ ಸೇರಿದಂತೆ ವಿವಿಧ ಕಾರ್ಯಕ್ರಮಗಳು ನಡೆಯಲಿದೆ ಎಂದು ತಿಳಿಸಿದರು.

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top