ದಾವಣಗೆರೆ: ಮಾಜಿ ಸಚಿವ ಎಸ್.ಎಸ್.ಮಲ್ಲಿಕಾರ್ಜನ್ ಒಡೆತನದ ನಗರದ ಕಲ್ಲೇಶ್ವರ ಮಿಲ್ ಮೇಲೆ ಅರಣ್ಯ ಇಲಾಖೆ ಅಧಿಕಾರಿಗಳು ಏಕಾಏಕಿ ದಾಳಿ ನಡೆಸಿದ್ದಾರೆ. 20ಕ್ಕೂ ಹೆಚ್ಚು ಅಧಿಕ ಅರಣ್ಯ ಇಲಾಖೆ ಅಧಿಕಾರಿಗಳ ತಂಡ ದಾಳಿ ನಡೆಸಿದೆ.
ಜಿಂಕೆ, ಕಾಡು ಹಂದಿ ಸೇರಿ ಇತರೆ ಪ್ರಾಣಿಗಳನ್ನು ಅಕ್ರಮವಾಗಿ ಸಾಕಾಣಿಕೆ ಶಂಕೆ ವ್ಯಕ್ತಪಡಿಸಿ ನಡೆಸಿದ್ದಾರೆ. ಅರಣ್ಯ ಇಲಾಖೆ ಅಧಿಕಾರಿಗಳು ಒಂದು ಗಂಟೆ ಮಿಲ್ನಲ್ಲಿ ಪರಿಶೀಲನೆ ನಡೆಸಿದ್ದಾರೆ ಎಂದು ಡಿಎಫ್ಓ ಅಧಿಕಾರಿ ಮಾಹಿತಿ ನೀಡಿದ್ದಾರೆ.



