ದಾವಣಗೆರೆ: ಪ್ರೀತಿ ನಿರಾಕರಿಸಿದ್ದಕ್ಕೆ ನಡು ರಸ್ತೆಯಲ್ಲಿಯೇ ಚಾಕುವಿನಿಂದ ಚುಚ್ಚಿ ಯುವತಿಯ ಬರ್ಬರ ಹತ್ಯೆ ಮಾಡಿ ಯುವಕ ಪರಾರಿ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಪ್ರೀತಿಸುತ್ತಿದ್ದ ಯುವತಿಗೆ ಬೇರೊಬ್ಬನ ಜೊತೆ ವಿವಾಹ ನಿಶ್ಚಯವಾಗಿತ್ತು. ಯುವತಿ ಪ್ರೀತಿ ನಿರಾಕರಿಸಿದ್ದಕ್ಕೆ ಯುವಕ, ನಡು ರಸ್ತೆಯಲ್ಲಿಯೇ ಯುವತಿಯನ್ನು ಚಾಕುವಿನಿಂದ ಚುಚ್ಚಿ ಭೀಕರವಾಗಿ ಕೊಲೆ ಮಾಡಿದ ಘಟನೆ ನಗರದ ಪಿಜೆ ಬಡಾವಣೆಯಲ್ಲಿ ನಡೆದಿದೆ. ಈ ಘಟನೆ ಇಡೀ ದಾವಣಗೆರೆ ಜನರನ್ನು ಬೆಚ್ಚಿಬೀಳಿಸುವಂತ್ತಿದೆ.

ವಿನೋಭನಗರದ ನಿವಾಸಿ ಚಾಂದ್ ಸುಲ್ತಾನಾ (24) ಕೊಲೆಯಾದ ಯುವತಿಯಾಗಿದ್ದಾರೆ. ಸಾದತ್ ಕೊಲೆ ಮಾಡಿದ ಯುವಕನಾಗಿದ್ದಾನೆ. ನಗರದ ಚರ್ಚ್ ರಸ್ತೆಯಲ್ಲಿ ಹಾಡಹಗಲೇ ಯುವತಿಯ ಬರ್ಬರ ಹತ್ಯೆ ನಡೆದಿದೆ. ಯುವತಿಯ ಕೊಲೆ ದೃಶ್ಯ ಸಿಸಿ ಟಿವಿಯಲ್ಲಿ ದಾಖಲಾಗಿದೆ.

ಯುವತಿ ಸ್ಕೂಟರ್ ನಲ್ಲಿ ಬಂದು ನಿಲ್ಲಿಸಿ ತನ್ನ ಯುವಕನ ಜತೆ ಮಾತನಾಡುತ್ತಿದ್ದಾಳೆ. ಏಕಾಏಕಿ ಚಾಕುವಿನಿಂದ ಯುವತಿಗೆ ಹಲವಾರು ಬಾರಿ ಇರಿದು ಯುವಕ ಬೈಕ್ ನಲ್ಲಿ ಪರಾರಿಯಾಗಿದ್ದಾನೆ. ಕೆಲವರು ಹಲ್ಲೆ ನಡೆಸುತ್ತಿದ್ದನ್ನು ನೋಡುತ್ತಿದ್ದರೂ ರಕ್ಷಣೆಗೆ ಮುಂದಾಗಿಲ್ಲ. ಕೂಡಲೇ ಯುವಕ ಬೈಕ್ ನಲ್ಲಿ ನಾಪತ್ತೆಯಾಗಿದ್ದಾನೆ.

ನಗರದ ಪಿಜೆ ಬಡಾವಣೆಯ ಚರ್ಚ್ ರಸ್ತೆಯಲ್ಲಿ ಬೆಳಗ್ಗೆ 11.30ಕ್ಕೆ ಈ ಕೃತ್ಯ ನಡೆದಿದೆ. ಚಾಂದ್ ಸುಲ್ತಾನಾಳಿಗೆ 8 ತಿಂಗಳ ಹಿಂದೆ ಹರಿಹರ ಮೂಲದ ಯುವಕನೊಂದಿಗೆ ನಿಶ್ಚಿತಾರ್ಥ ಆಗಿತ್ತು. ವಿವಾಹಕ್ಕೆ ವಿರೋಧಿಸಿ ಸುಲ್ತಾನಳನ್ನು ಹತ್ಯೆ ಮಾಡಲಾಗಿದೆ. ಘಟನಾ ಸ್ಥಳಕ್ಕೆ ಜಿಲ್ಲಾ ರಕ್ಷಣಾಧಿಕಾರಿ ಸಿ.ಬಿ. ರಿಷ್ಯಂತ್ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *