ಅಕ್ರಮ-ಸಕ್ರಮ ಯೋಜನೆಯಡಿ 66 ಸಾವಿರ ಕೃಷಿ ಪಂಪ್ ಸೆಟ್ ಗಳಿಗೆ ವಿದ್ಯುತ್ ಸಂಪರ್ಕಕ್ಕೆ ಟೆಂಡರ್; ಇಂಧನ ಸಚಿವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಳಗಾವಿ; ರಾಜ್ಯದಲ್ಲಿ 12,03,887 ಕೃಷಿ ಪಂಪ್‌ಸೆಟ್‌ಗೆ ಅಕ್ರಮ ಸಕ್ರಮ ಯೋಜನೆಯಡಿ ಅರ್ಜಿಹಾಕಿದ್ದಾರೆ. ಇದರಲ್ಲಿ 66,086 ಮಂದಿಗೆ ವಿದ್ಯುತ್‌ ಸಂಪರ್ಕ ಒದಗಿಸುವುದಕ್ಕೆ ಟೆಂಡರ್‌ ಆಗಿದೆ. ಉಳಿದದ್ದನ್ನು ಮುಂದಿನ ಹಂತದಲ್ಲಿ ಒದಗಿಸಲಾಗುವುದು ಎಂದು ಇಂಧನ ಸಚಿವ ಸುನಿಲ್ ಕುಮಾರ್ ಹೇಳಿದರು.

ವಿಧಾನಸಭೆಯಲ್ಲಿ ಪ್ರಶ್ನೋತ್ತರ ವೇಳೆ ಮಾಲೂರು ಶಾಸಕ ನಂಜೇಗೌಡ ಹಾಗೂ ಮಧುಗಿರಿ ಶಾಸಕ ವೀರಭದ್ರಪ್ಪ ಅವರ ಪ್ರಸ್ತಾಪಕ್ಕೆ ಉತ್ತರಿಸಿ, ವಿದ್ಯುತ್‌ ಸಂಪರ್ಕ ಅಂತಿಮವಾಗುವ ವರೆಗೂ ಕೃಷಿಕರಿಗೆ ವಿಜಿಲೆನ್ಸ್‌ ತಂಡಗಳಿಂದ ಯಾವುದೇ ಸಮಸ್ಯೆ ಉಂಟು ಮಾಡುವುದಿಲ್ಲ. ಒಟ್ಟಾರೆಯಾಗಿ ರಾಜ್ಯದಲ್ಲಿ 32.55 ಲಕ್ಷ ಕೃಷಿ ಪಂಪ್‌ಸೆಟ್‌ಗಳಿವೆ, 1900 ಮೆಗಾವಾಟ್‌ ವಿದ್ಯುತ್‌ ಪ್ರತಿದಿನ ಇದಕ್ಕೆ ವಿನಿಯೋಗವಾಗುತ್ತದೆ, ವರ್ಷಕ್ಕೆ 13,632 ಕೋಟಿ ರೂ. ಸಬ್ಸಿಡಿಯನ್ನು ರೈತರಿಗಾಗಿ ನೀಡಲಾಗುತ್ತದೆ ಎಂದೂ ತಿಳಿಸಿದರು

ಕೇಂದ್ರ ಸರ್ಕಾರದ ನೆರವಿನೊಂದಿಗೆ ಪಿಎಂ ಕುಸುಮ್‌-ಸಿ ಯೋಜನೆಯಡಿ 3,37,000 ರೈತರ ಕೃಷಿಪಂಪ್‌ಸೆಟ್‌ಗಳಿಗೆ ಸೋಲಾರ್‌ ಫೀಡರ್‌ ಮೂಲಕ ವಿದ್ಯುತ್‌ ಸಂಪರ್ಕ ಒದಗಿಸಲಾಗುತ್ತದೆ . ಪ್ರಧಾನಿಯವರ ಈ ಕೊಡುಗೆಯನ್ನು ಬಳಸಿಕೊಳ್ಳಲಾಗುತ್ತಿದೆ. ಈಗಾಗಲೇ ಯೋಜನೆಗೆ ಟೆಂಡರ್‌ ಕೂಡ ಆಗಿದೆ, ಒಟ್ಟು 1300 ಮೆಗಾವ್ಯಾಟ್‌ ವಿದ್ಯುತ್‌ನ್ನು ಸೋಲಾರ್‌ಫೀಡರ್‌ ಮೂಲಕ ಐಪಿಸೆಟ್‌ಗಳಿಗೆ ನೀಡಲಾಗುತ್ತಿದೆ ಎಂದು ತಿಳಿಸಿದರು.

ಇದುವರೆಗೆ 71,115 ರೈತರು ತತ್ಕಾಲ್‌ ಯೋಜನೆಯಡಿ ಐಪಿ ಸೆಟ್‌ಗಳಿಗೆ ವಿದ್ಯುತ್‌ ಸಂಪರ್ಕಕ್ಕೆ ಅರ್ಜಿ ಸಲ್ಲಿಸಿದ್ದಾರೆ. ಅದರಲ್ಲಿ ಮೊದಲ ಹಂತದಲ್ಲಿ 2014 ರೈತರಿಗೆ ವಿದ್ಯುತ್‌ ಸಂಪರ್ಕ ಒದಗಿಸಲಾಗುವುದು. 68 ಸಾವಿರ ರೈತರು 10 ಸಾವಿರ ರೂ. ವಂತಿಗೆ ಪಾವತಿಸಿದ್ದಾರೆ, ಆದರೆ ಆಯಾ ಕಂಪನಿ ತಲಾ 1.5 ಲಕ್ಷ ರೂ. ವ್ಯಯಿಸಬೇಕಾಗಿದ್ದು ಇಷ್ಟು ರೈತರಿಗೆ ದೊಡ್ಡ ಮೊತ್ತ ವಿನಿಯೋಗಿಸಬೇಕಾಗುತ್ತದೆ. ಆದ್ದರಿಂದ ಮೊದಲ ಹಂತದಲ್ಲಿ 2014ಮಂದಿಗೆ ಪರಿವರ್ತಕಗಳನ್ನು ಒದಗಿಸಿ ವಿದ್ಯುತ್‌ ಸಂಪರ್ಕ ಒದಗಿಸಲಾಗುವುದು. ಜ್ಯೇಷ್ಠತೆ ಆಧಾರದಲ್ಲಿ ಮುಂದೆ ವಿದ್ಯುತ್‌ ಸಂಪರ್ಕ ನೀಡಲಾಗುವುದು ಎಂದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *