ಶೀಘ್ರವೇ ದಾವಣಗೆರೆಗೆ ಎಲೆಕ್ಟ್ರಿಕ್ ಬಸ್ ಸೇವೆ ಆರಂಭ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಬೆಂಗಳೂರು: ಶೀಘ್ರದಲ್ಲಿಯೇ ಬೆಂಗಳೂರಿನಿಂದ ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರು ಮಾರ್ಗದಲ್ಲಿ ಹವಾನಿಯಂತ್ರಿತ 50 ಎಲೆಕ್ಟ್ರಿಕ್ ಬಸ್‌ಗಳು ಸಂಚರಿಸಲಿವೆ. ಬೆಂಗಳೂರು, ಮೈಸೂರಿನಲ್ಲಿ ಚಾರ್ಚಿಂಗ್‌ ಕೇಂದ್ರ ಸ್ಥಾಪಿಸಲಾಗಿದೆ. ಮಡಿಕೇರಿ, ವಿರಾಜಪೇಟೆ, ದಾವಣಗೆರೆ, ಶಿವಮೊಗ್ಗ, ಚಿಕ್ಕಮಗಳೂರಿನಲ್ಲಿ ಚಾರ್ಚಿಂಗ್‌ ಕೇಂದ್ರದ ಕಾಮಗಾರಿ ಪ್ರಗತಿಯಲ್ಲಿದೆ.

ಕೆಎಸ್‌ಆರ್‌ಟಿಸಿಬೆಂಗಳೂರಿನಿಂದ ಮೈಸೂರಿಗೆ ಮೊದಲ ಎಲೆಕ್ಟ್ರಿಕ್ ಬಸ್‌ಗೆ ಸಾರಿಗೆ ಸಚಿವ ಬಿ.ಶ್ರೀರಾಮುಲು ಹಾಗೂ ಕೆಎಸ್‌ಆರ್‌ಟಿಸಿ ನಿಗಮದ ಅಧ್ಯಕ್ಷ ಎಂ.ಚಂದ್ರಪ್ಪ ಚಾಲನೆ ನೀಡಿದರು. ನಂತರ ಮಾತನಾಡಿದ ಶ್ರೀರಾಮುಲು,‌ ಕೆಎಸ್‌ಆರ್‌ಟಿಸಿಗೆ 3,500 ಹೊಸದಾಗಿ ಬಸ್‌ಗಳನ್ನು ಖರೀದಿಸಲಾಗುತ್ತಿದೆ. ಫೆಬ್ರುವರಿಗೆ ಬೆಂಗಳೂರಿನಲ್ಲಿ ಡಬಲ್‌ ಡೆಕ್ಕರ್‌ ಬಸ್‌ ಸಂಚಾರಕ್ಕೆ ಚಾಲನೆ ನೀಡಲಾಗುವುದು ಎಂದರು.

ಏಲೆಕ್ಟಾ ಕಂಪನಿ ಅಭಿವೃದ್ಧಿಗೊಳಿಸಿರುವ ಈ ಬಸ್‌, ಆರಾಮದಾಯಕ ಪುಶ್‌ಬ್ಯಾಕ್‌ ಸೀಟ್ ಹೊಂದಿದೆ. ಗುಡ್ಡಗಾಡು, ಬಯಲು ಪ್ರದೇಶಗಳಲ್ಲಿ ಸುಗಮವಾಗಿ ಸಂಚರಿಸಲಿದೆ. ಪ್ರತಿ ಚಾರ್ಜ್‌ಗೆ 300 ಕಿ.ಮೀ ದೂರ ಪ್ರಯಾಣಿಸಬಹುದಾಗಿದೆ. 3 ಗಂಟೆಯ ಅವಧಿಯಲ್ಲಿ ಬ್ಯಾಟರಿ ಸಂಪೂರ್ಣ ರೀಚಾರ್ಜ್‌ ಆಗಲಿದೆ. ನಿರ್ವಾಹಕ, ಚಾಲಕ ಸೇರಿ 43 ಆಸನ ಸಾಮರ್ಥ್ಯವಿದೆ. ಸಿ.ಸಿ.ಟಿ.ವಿ ಕ್ಯಾಮೆರಾಗಳು, ತುರ್ತು ಬಟನ್‌, ಅಗ್ನಿಶಾಮಕ ಸಾಧನ, ಪ್ರಥಮ ಚಿಕಿತ್ಸಾ ಕಿಟ್‌, ಗ್ಲಾಸ್ ಹ್ಯಾಮರ್‌  ಸುರಕ್ಷತಾ ಕ್ರಮಗಳಿವೆ. ಪ್ರಯಾಣಿಕರ ಬಳಕೆಗೆ ವೈ-ಫೈ ಮತ್ತು ಪ್ರತಿ ಆಸನಕ್ಕೂ ಯುಎಸ್‌ಬಿ ಚಾರ್ಜರ್‌ ಅಳವಡಿಸಲಾಗಿದೆ. ಪ್ರಯಾಣಿಕರ ಲಗೇಜ್‌ ಇಡಲು ಸ್ಥಳಾವಕಾಶವಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *