Connect with us

Dvgsuddi Kannada | online news portal | Kannada news online

ದಾವಣಗೆರೆ: ಜಿಎಂಐಟಿಯ 20 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

IMG 20230103 WA0003

ದಾವಣಗೆರೆ

ದಾವಣಗೆರೆ: ಜಿಎಂಐಟಿಯ 20 ವಿದ್ಯಾರ್ಥಿಗಳು ಟಿಸಿಎಸ್ ಕಂಪನಿಗೆ ಆಯ್ಕೆ

ದಾವಣಗೆರೆ: ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಕಂಪನಿಯು ಇತ್ತೀಚೆಗೆ ನಡೆಸಿದ ಕ್ಯಾಂಪಸ್ ಸಂದರ್ಶನದಲ್ಲಿ ನಗರದ ಜಿಎಂ ತಾಂತ್ರಿಕ ಮಹಾವಿದ್ಯಾಲಯದ ಅಂತಿಮ ವರ್ಷದ 20 ವಿದ್ಯಾರ್ಥಿಗಳು ಆಯ್ಕೆಯಾಗಿದ್ದಾರೆ ಎಂದು ಕಾಲೇಜಿನ ಪ್ರಾಂಶುಪಾಲರಾದ ಡಾ ವೈ ವಿಜಯಕುಮಾರ್ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಅಂತಿಮ ವರ್ಷದ ಎಲ್ಲಾ ಅರ್ಹ ವಿದ್ಯಾರ್ಥಿ ಪಾಲ್ಗೊಂಡು ಕೊನೆಗೆ 20 ವಿದ್ಯಾರ್ಥಿಗಳು ಆಯ್ಕೆಯಾದರು. ಆಯ್ಕೆಯಾದ 20 ವಿದ್ಯಾರ್ಥಿಗಳಲ್ಲಿ 3 ವಿದ್ಯಾರ್ಥಿಗಳು ಟಿಸಿಎಚ್ ಡಿಜಿಟಲ್ ಮತ್ತು ಉಳಿದ 17 ವಿದ್ಯಾರ್ಥಿಗಳು ಟಿಸಿಎಸ್ ನಿಂಜ ಆಫರ್ ನೀಡಿವೆ ಎಂದು ಕಾಲೇಜಿನ ತರಬೇತಿ ಮತ್ತು ಉದ್ಯೋಗ ವಿಭಾಗದ ಮುಖ್ಯಸ್ಥರಾದ ಶ್ರೀ ತೇಜಸ್ವಿ ಕಟ್ಟಿಮನಿ ಟಿ ಆರ್ ತಿಳಿಸಿದ್ದಾರೆ. ಟಿಸಿಎಸ್ ಡಿಜಿಟಲ್ ಆಫರ್ ವಾರ್ಷಿಕ 7.5 ಲಕ್ಷ ರೂಗಳನ್ನು ಮತ್ತು ಟಿಸಿಎಸ್ ನಿಂಜ ಆಫರ್ ವಾರ್ಷಿಕ 3.5 ಲಕ್ಷ ರೂಗಳನ್ನು ನೀಡಿವೆ.

ಅನೇಕ ಪ್ರತಿಷ್ಠಿತ ಕಂಪನಿಗಳು ಈಗಾಗಲೇ ವಿದ್ಯಾರ್ಥಿಗಳನ್ನು ಸಂದರ್ಶನ ಪ್ರಕ್ರಿಯೆ ನಡೆಸಿ ಆಯ್ಕೆ ಮಾಡಿಕೊಂಡಿದ್ದು, ಅವುಗಳಲ್ಲಿ ಟೆಕ್ ಮಹೇಂದ್ರ, ರೋಬೋ ಸಾಫ್ಟ್ ಟೆಕ್ನಾಲಜೀಸ್, ಕ್ವಾಲಿಟೆಸ್ಟ್, ಎಕ್ಸಾ ವೇರ್, ಆಫ್ಟಂ ಸಲ್ಯೂಷನ್ಸ್, ಎಸ್ ಎಲ್ ಕೆ ಸಾಫ್ಟ್ ವೇರ್ ಸರ್ವಿಸಸ್, ಡೆಲಾಯ್ಟ್, ಮುಂತಾದವುಗಳಾಗಿವೆ ಮತ್ತು ಇನ್ನೂ ಅನೇಕ ಕಂಪನಿಗಳು ಆಸಕ್ತಿಯನ್ನು ತೋರಿದ್ದು, ಮುಂದಿನ ದಿನಗಳಲ್ಲಿ ಇನ್ನು ಹೆಚ್ಚಿನ ಆಯ್ಕೆ ಪ್ರಕ್ರಿಯೆಗಳು ನಡೆಯಲಿವೆ ಎಂದು ಇದೆ ವೇಳೆ ತಿಳಿಸಿದರು.

ಸಿವಿಲ್ ಇಂಜಿನಿಯರಿಂಗ್ ಮತ್ತು ಮೆಕ್ಯಾನಿಕಲ್ ಇಂಜಿನಿಯರಿಂಗ್ ವಿಭಾಗದ ವಿದ್ಯಾರ್ಥಿಗಳಿಗೆ ಕಂಪನಿಗಳು ಫೆಬ್ರುವರಿ ತಿಂಗಳಿನ ನಂತರ ತಮ್ಮ ಆಯ್ಕೆ ಪ್ರಕ್ರಿಯೆಯನ್ನು ನಡೆಸಲಿವೆ ಎಂದು ಈಗಾಗಲೇ ಮನದಟ್ಟು ಮಾಡಿವೆ. ಈ ವಿಭಾಗಗಳ ವಿದ್ಯಾರ್ಥಿಗಳಿಗೆ ಸಾಕಷ್ಟು ಅವಕಾಶಗಳನ್ನು ಜಿಎಂಐಟಿ ಮುಂದಿನ ದಿನಗಳಲ್ಲಿ ಒದಗಿಸಲಿದೆ ಎಂದು ಪ್ರಾಂಶುಪಾಲರು ಇದೇ ವೇಳೆ ತಿಳಿಸಿದರು.

ಆಯ್ಕೆಯಾದ ಎಲ್ಲಾ ವಿದ್ಯಾರ್ಥಿಗಳಿಗೆ ಕಾಲೇಜಿನ ಚೇರ್ಮನ್ ಆದ ಶ್ರೀ ಜಿಎಂ ಲಿಂಗರಾಜು, ಆಡಳಿತ ಅಧಿಕಾರಿ ಶ್ರೀ ವೈಯೂ ಸುಭಾಷ್ ಚಂದ್ರ, ಎಲ್ಲಾ ವಿಭಾಗಗಳ ಮುಖ್ಯಸ್ಥರುಗಳು ಮತ್ತು ಅಧ್ಯಾಪಕ ವರ್ಗದವರು ಅಭಿನಂದನೆಗಳನ್ನು ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top