ದಾವಣಗೆರೆ: ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮದಿಂದ 2022-23ನೇ ಸಾಲಿನ ಹಿಂದುಳಿದ ವರ್ಗದವರಿಗೆ ಹೊಲಿಗೆ ಯಂತ್ರ ವಿತರಣೆ ಯೋಜನೆಗೆ ಸೇವಾಸಿಂಧು ತಂತ್ರಾಂಶದಲ್ಲಿ ಆನ್ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಮೇಲ್ಕಂಡ ಸೌಲಭ್ಯಗಳನ್ನು ಪಡೆಯಲು ಇಚ್ಚಿಸುವ ಹಿಂದುಳಿದ ವರ್ಗಗಳ ಮಹಿಳೆಯರು ಸೇವಾಸಿಂಧು ಪೆÇೀರ್ಟಲ್ ಮುಖಾಂತರ ಗ್ರಾಮ ಒನ್, ಬೆಂಗಳೂರು ಒನ್ ಮತ್ತು ಕರ್ನಾಟಕ ಒನ್ ಸೇವಾ ಕೇಂದ್ರಗಳಲ್ಲಿ ಆನ್ಲೈನ್ ಮೂಲಕ ಜ.05 ರಿಂದ ಫೆ.23 ವರೆಗೆ ಅರ್ಜಿಗಳನ್ನು ಸಲ್ಲಿಸಬಹುದು.
ವೆಬ್ಸೈಟ್ www.dbcdc.karnataka.gov.in ನಲ್ಲಿ ಹೆಚ್ಚಿನ ಮಾಹಿತಿಯ್ನು ಪಡೆಯಬಹುದು. ದೂ.ಸಂ:080-22374832, 8050770004, 8050770006, 7090400100/7090400900 ಹಾಗೂ ಜಿಲ್ಲಾ ನಿಗಮ ಡಿ.ದೇವರಾಜ ಅರಸು ಹಿಂದುಳಿದ ವರ್ಗಗಳ ಅಭಿವೃದ್ಧಿ ನಿಗಮ, ಕುರುಬರ ಹಾಸ್ಟೇಲ್ ಕಟ್ಟಡ, ಹದಡಿ ರಸ್ತೆ, ದಾವಣಗೆರೆ ದೂರವಾಣಿ ಸಂಖ್ಯೆ: 08192-230934 ಸಂಪರ್ಕಿಸಬಹುದೆಂದು ಜಿಲ್ಲಾ ವ್ಯವಸ್ಥಾಪಕ ಸಾತ್ವಿಕ್.ಹೆಚ್.ಸಿ ತಿಳಿಸಿದ್ದಾರೆ.



