ಹರಿಹರ; ಗ್ರಾಮೀಣ ಪ್ರದೇಶದಿಂದ ಕಾಲೇಜುಗಳಿಗೆ ಬರುವ ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕೆಎಸ್ ಆರ್ ಟಿಸಿ ಬಸ್ ಬಿಡುತ್ತಿಲ್ಲ ಎಂದು ವಿದ್ಯಾರ್ಥಿಗಳು ಹರಿಹರ ನಿಲ್ದಾಣ ಬಳಿ ಪ್ರತಿಭಟನೆ ನಡೆಸಿದರು.
ಹರಿಹರ ತಾಲ್ಲೂಕಿನ ಮಲೇಬೆನ್ನೂರು, ಕುಂಬಳೂರು, ಜಿಗಳಿ, ಬೆಳ್ಳೂಡಿ, ಸಿರಿಗೆರೆ, ಸೇರಿದಂತೆ ಅನೇಕ ಕಡೆಯಿಂದ ಹರಿಹರ ನಗರಕ್ಕೆ ಬರುವ ಕಾಲೇಜು ವಿದ್ಯಾರ್ಥಿಗಳಿಗೆ ಸರಿಯಾದ ಸಮಯಕ್ಕೆ ಕೆಎಸ್ ಅರ್ ಟಿಸಿ ಬಸ್ ಬಿಡುತ್ತಿಲ್ಲ. ವಿದ್ಯಾರ್ಥಿಗಳು ಬರುವ ಬೆಳಗ್ಗೆ ಹಾಗೂ ಹೊರಡುವ ಸಂಜೆ ಸಮಯದಲ್ಲಿ ನಾನ್ ಸ್ಟಾಪ್ ಬಸ್ ಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬಿಡಲಾಗುತ್ತಿದೆ. ಇದರಿಂದ ವಿದ್ಯಾರ್ಥಿಗಳಿಗೆ ತುಂಬಾ ತೊಂದರೆ ಆಗುತ್ತಿದೆ ಎಂದು ವಿದ್ಯಾರ್ಥಿಗಳು ದೂರಿದರು. ವಿದ್ಯಾರ್ಥಿಗಳು ಮತ್ತು ಕೆಎಸ್ ಆರ್ ಟಿಸಿ ಅಧಿಕಾರಿಗಳ ನಡವೆ ಗಲಾಟೆ ಮಾಹಿತಿ ತಿಳಿದ ಹೊಯ್ಸಳ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಿ ಅಧಿಕಾರಿಗಳು ಮತ್ತು ವಿದ್ಯಾರ್ಥಿಗಳ ಗಲಾಟೆ ತಿಳಿಗೊಳಿಸಿದರು.



