ಡಿವಿಜಿ ಸುದ್ದಿ, ರಾಯಚೂರು: ಮದ್ಯವ್ಯಸನ ಮುಕ್ತ ಸಮಾಜಕ್ಕಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಸಹಯೋಗದಲ್ಲಿ ಮದ್ಯ ವರ್ಜನ ಶಿಬಿರದಲ್ಲಿ 44 ಜನ ಮದ್ಯ ವ್ಯಸನಿಗಳು ಮದ್ಯ ಸೇವನೆ ಬಿಡುವಲ್ಲಿ ಯಶಸ್ವಿಯಾಗಿದ್ದಾರೆ.
ನಗರದ ಕನ್ನಡ ಭವನದಲ್ಲಿ ಕಳೆದ ಒಂದು ವಾರದಿಂದ ಮದ್ಯ ವರ್ಜನ ಶಿಬಿರ ಹಮ್ಮಿಕೊಳ್ಳಲಾಗಿತ್ತು. ಮದುವೆ ಮನೆಯಂತೆ ಶೃಂಗಾರಗೊಂಡಿದ್ದ ಕಾರ್ಯಕ್ರಮದಲ್ಲಿ ಆರತಿ ಬೆಳಗುವ ಮೂಲಕ ಶಿಬಿರಕ್ಕೆ ತೆರೆ ಎಳೆಯಲಾಯಿತು. ಕೊನೆಯ ದಿನ ಮದ್ಯ ವರ್ಜನೆ ಮಾಡಿದ ಕುಟುಂಬಸ್ಥರು ಈ ಕಾರ್ಯಕ್ರಮದಲ್ಲಿ ಪಾಲ್ಗೊಂಡು 44 ಜನ ಮದ್ಯ ವೆಸನದಿಂದ ಹೊರ ಬರುವುದಾಗಿ ಪ್ರತಿಜ್ಞೆ ಮಾಡಿದರು.
8 ದಿನಗಳ ಕಾಲ ನಡೆದ ಯಶಸ್ವಿ ಶಿಬಿರದಲ್ಲಿ ಮದ್ಯ ಬಿಟ್ಟ ಪುರುಷರು ಮದುಮಗನಂತೆ ಕಂಗೊಳಿಸ್ತಿದ್ರು.. ಗಂಡಂದಿರು ಹೆಂಡತಿಗೆ ಮಲ್ಲಿಗೆ ಮುಡಿಸಿದ್ರೆ, ಹೆಂಡತಿಯರು ಗಂಡನ ಆಶೀರ್ವಾದ ಪಡೆದರು. ಕುಡಿತ ಬಿಟ್ಟವರು ತಾಯಿ ಹಾಗೂ ಅಕ್ಕ, ತಂಗಿಯ ಆಶೀರ್ವಾದ ಪಡೆದಿದ್ರು. ಕೊನೆಯಲ್ಲಿ ಅಕ್ಷತೆ ಹಾಕಿ ಚಪ್ಪಾಳೆ ತಟ್ಟಿದ್ದು ವಿಶೇಷವಾಗಿತ್ತು.
ಕಳೆದ ನಾಲ್ಕು ವರ್ಷಗಳಿಂದ ಕುಡಿತದ ಚಟಕ್ಕೆ ಒಳಗಾಗಿ ಬದುಕು ಹಾಳುಮಾಡಿಕೊಂಡಿದ್ದೆ ಆದರೆ ಈಗ ಉತ್ತಮ ಜೀವನ ನಡೆಸುವ ಭರವಸೆ ಬಂದಿದೆ ಎಂದು ಶಿಬಿರದಿಂದ ಕುಡಿತದ ಚಟ ಬಿಟ್ಟಿರುವರ ಅಭಿಪ್ರಾಯವಾಗಿತ್ತು.



