ದಾವಣಗೆರೆ: ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ ವತಿಯಿಂದ ಎಸ್ಸಿಪಿ ಮತ್ತು ಟಿಎಸ್ಪಿ ಯೋಜನೆಯಡಿಯಲ್ಲಿ ಬಾಲ್ಯಾವಸ್ಥೆಯ ಮತ್ತು ಕಿಶೋರಾವಸ್ಥೆಯ ನಿರ್ಮೂಲನೆ ಮಾಡುವ ಬಗ್ಗೆ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸಲು ಸಂದೇಶ ಸಾರುವ ಹೋರ್ಡಿಂಗ್ಸ್ ಗಳಿಗೆ ಪ್ಲೇಕ್ಸ್ ಅಳವಡಿಸಲು ಆಸಕ್ತಿಯುಳ್ಳ ಸಂಸ್ಥೆಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ಜ.24 ರೊಳಗಾಗಿ ಜಿಲ್ಲಾ ಬಾಲಕಾರ್ಮಿಕ ಯೋಜನಾ ಸೊಸೈಟಿ, ಸಹಾಯಕ ಕಾರ್ಮಿಕ ಆಯುಕ್ತರ ಕಛೇರಿ, ಬಿ.ಎಸ್.ಎನ್.ಎಲ್ ಕಟ್ಟಡ 2ನೇ ಮಹಡಿ ದೇವರಾಜ್ ಅರಸ್ ಬಡಾವಣೆ ಪಿ.ಬಿ ರಸ್ತೆ ಇಲ್ಲಿಗೆ ಸಲ್ಲಿಸಬೇಕೆಂದು ಪ್ರಕಟಣೆ ತಿಳಿಸಿದೆ.



