ದಾವಣಗೆರೆ: ರಾಜ್ಯದ ಮಹಿಳೆಯರ ಕಲ್ಯಾಣಕ್ಕಾಗಿ ತಮ್ಮ ಪಕ್ಷ ಘೋಷಿಸಿರುವ ‘ಗೃಹ ಜ್ಯೋತಿ ಯೋಜನೆಯ 200 ಯೂನಿಟ್ ಉಚಿತ ವಿದ್ಯುತ್ ಮತ್ತು ‘ಗೃಹ ಲಕ್ಷ್ಮಿ’ ಯೋಜನೆಯಡಿ 2 ಸಾವಿರ ನಗದು ಹಣ ನೀಡಲು ಕಾಂಗ್ರೆಸ್ ಪಕ್ಷದಿಂದ ಬೃಹತ್ ನೋಂದಣಿ ಅಭಿಯಾನ ಕೈಗೊಳ್ಳಲಾಗಿವುದು ಎಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಹೇಳಿದ್ದಾರೆ.
ನಗರದ ಹೈಸ್ಕೂಲ್ ಮೈದಾನದಲ್ಲಿ ಪ್ರಜಾಧ್ವನಿ ಯಾತ್ರೆ ಉದ್ದೇಶಿಸಿ ಮಾತನಾಡಿದ ಅವರು, ಗೃಹ ಲಕ್ಷ್ಮಿ ಯೋಜನೆಯಡಿ ನೋಂದಣಿಗಾಗಿ ಆನ್ ಲೈನ್ ಮತ್ತು ಆಫ್ ಲೈನ್ ನಲ್ಲಿ ನೋಂದಾಯಿಸಿಕೊಳ್ಳಬಹುದು. ಪ್ರತಿ ಮಹಿಳೆಗೆ ಮಾಸಿಕ 2,000 ರೂಪಾಯಿ ನಗದು ಸಹಾಯವನ್ನು ನೀಡಲಾಗುತ್ತದೆ. ಇನ್ನು ಕೆಲವೇ ತಿಂಗಳುಗಳಿರುವ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಪಕ್ಷ ಅಧಿಕಾರಕ್ಕೆ ಬಂದರೆ ‘ಗೃಹ ಜ್ಯೋತಿ ಯೋಜನೆ’ ಅಡಿಯಲ್ಲಿ 200 ಯೂನಿಟ್ ಉಚಿತ ವಿದ್ಯುತ್ ನೀಡಲಾಗುವುದು ಎಂದರು.ನೋಂದಣಿ ಅಭಿಯಾನ ಪಕ್ಷದ ಕಾರ್ಯಕರ್ತರಿಂದಲೇ ನೋಂದಣಿ ಮಾಡಲಾಗುವುದು ಎಂದರು.
ಕಾಂಗ್ರೆಸ್ ಪಕ್ಷವು ಅಧಿಕಾರಕ್ಕೆ ಬಂದರೆ 18,000 ಯೂನಿಟ್ ಉಚಿತ ವಿದ್ಯುತ್ (ತಿಂಗಳಿಗೆ 1,500 ರೂ,200 ಯೂನಿಟ್) ಮತ್ತು 24,000 (ಪ್ರತಿ ತಿಂಗಳಿಗೆ 2,000 ರೂ.) ಆರ್ಥಿಕ ನೆರವು ನೀಡುತ್ತದೆ ಎಂದು ಅವರು ಹೇಳಿದರು. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ 135 ರಿಂದ 140 ಸ್ಥಾನಗಳನ್ನು ಗೆಲ್ಲಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕೋವಿಡ್ -19 ಸಾಂಕ್ರಾಮಿಕ ರೋಗವು ಹೆಚ್ಚಿದ್ದಾಗ ಕಾಂಗ್ರೆಸ್ ಹಿರಿಯ ಡಾ.ಶಾಮನೂರು ಶಿವಶಂಕರಪ್ಪ ಅವರ ಕುಟುಂಬದಿಂದ ದಾವಣಗೆರೆ ಜಿಲ್ಲೆಯಾದ್ಯಂತ 16 ಕೋಟಿ ರೂಪಾಯಿ ಉಚಿತ ಲಸಿಕೆ ನೀಡಿದ್ದಾರೆ ಎಂದರು.



