ಬೆಂಗಳೂರು: ಕೊಡಗು, ಚಿಕ್ಕಮಗಳೂರು, ಚಾಮರಾಜನಗರ, ಮೈಸೂರು ಮತ್ತು ಮಂಡ್ಯ ಜಿಲ್ಲೆಯ ವಿವಿಧೆಡೆ ನಿನ್ನೆ (ಜ.24) ಜೋರು ಮಳೆಯಾಗಿದೆ. ಈ ಮಳೆ ಜ.27ರಿಂದ ಫೆ.2ರವರೆಗೆ ಹೆಚ್ಚು ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಡಿಕೇರಿ, ಭಾಗಮಂಡಲ, ಚೆಂಬು, ವಿರಾಜಪೇಟೆ ತಾಲ್ಲೂಕಿನ ಸಿದ್ದಾಪುರ, ಅಮ್ಮತ್ತಿ, ಸೋಮವಾರಪೇಟೆಯಲ್ಲಿ ಭಾರೀ ಮಳೆಯಾಗಿದೆ. ಒಣಗಿಸಲು ಕಣದಲ್ಲಿ ಹಾಕಿದ್ದ ಕಾಫಿ ಹಾಗೂ ಕೊಯ್ಲು ಮಾಡಿದ್ದ ಕಾಫಿ ಮಳೆಯಿಂದ ಹಾಳಾಗಿದೆ. ಅಕಾಲಿಕ ಮಳೆಯಿಂದ ಬೆಳೆಗಾರರು ಕಂಗಾಲಾಗಿದ್ದಾರೆ.
ಇನ್ನೂ ಚಾಮರಾಜನಗರ, ಯಳಂದೂರು, ಮೈಸೂರು, ಶ್ರೀರಂಗಪಟ್ಟಣ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ, ಕೊಪ್ಪ, ಎನ್.ಆರ್.ಪುರ, ಶೃಂಗೇರಿ ತಾಲ್ಲೂಕಿನಲ್ಲೂ ಮಳೆಯಾಗಿದೆ. ಮೂಡಿಗೆರೆ ತಾಲ್ಲೂಕಿನ ಬೆಟ್ಟಗೆರೆ, ಫಲ್ಗುಣಿ, ಭಾರತೀಬೈಲ್, ಹುಲ್ಲೇಮನೆ, ಕೊಪ್ಪ , ಎನ್.ಆರ್.ಪುರ, ಶೃಂಗೇರಿ ಭಾಗದಲ್ಲಿ ಮಳೆಯಾಗಿದೆ.



