ದಾವಣಗೆರೆ: ಕುಡಿದ ಮತ್ತಿನಲ್ಲಿ ಯುವತಿಯರಿಬ್ಬರ ಜಗಳ; ಬಿಡಿಸಲು ಹೋದ ಪೊಲೀಸರ ಮೇಲೆ ಹಲ್ಲೆ-ಇಬ್ಬರ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಕುಡಿದ ಮತ್ತಿನಲ್ಲಿ ಹಣಕಾಸಿನ ವಿಚಾರಕ್ಕೆ ಇಬ್ಬರು ಯುವತಿಯರ ನಡುವೆ ಜಗಳ ನಡೆದಿದ್ದು, ಬಿಡುಸಲು ಹೋದ ಪೊಲೀಸರ ಮೇಲೆಯೇ ಹಲ್ಲೆ ಮಾಡಿದ್ದಾರೆ. ಜಗಳವಾಡಿದ ಇಬ್ಬರು ಯುವತಿಯರನ್ನು ಬಂಧಿಸಲಾಗಿದೆ.

ಮುಂಬಯಿ ಮೂಲದ ಇಬ್ಬರು ಯುವತಿಯರು, ಹಣಕಾಸಿನ ವಿಚಾರಕ್ಕಾಗಿ ದಾವಣಗೆರೆ ನಗರದ ವಿದ್ಯಾನಗರ ಪೊಲೀಸ್ ಠಾಣೆ ಮುಂದೆ ಜಗಳ ನಡೆದಿದ್ದು, ಜಗಳ ಬಿಡಿಸಲು ಹೋದ ಕಾನ್‌ಸ್ಟೆಬಲ್‌ಗೆ ಗಾಯಗಳಾಗಿವೆ. ಇವೆಂಟ್ ಮ್ಯಾನೇಜ್ಮೆಂಟ್ ಹೆಸರಿನಲ್ಲಿ ಮುಂಬಯಿಯಿಂದ ಇಬ್ಬರು ಹುಡುಗಿಯರನ್ನು, ಶಿವಮೊಗ್ಗದ ಶಿಕಾರಿಪುರ ಮೂಲದ ವಕೀಲರಾದ ಮಂಜುನಾಥ, ಹರ್ಷ ಎಂಬುವರು ನಗರಕ್ಕೆ ಕರೆಸಿದ್ದರು.

ಯುವತಿಯರಿಗೆ ಹಣ ಕೊಡದ ಹಿನ್ನೆಲೆಯಲ್ಲಿ ಕುಡಿದ ಮತ್ತಿನಲ್ಲಿದ್ದ ಯುವತಿಯರು ಠಾಣೆ ಬಳಿ ಮಂಜುನಾಥ, ಹರ್ಷ ಜತೆ ತಡರಾತ್ರಿ ಜಗಳವಾಡಿದ್ದಾರೆ. ಈ ವೇಳೆ ಜಗಳ ನಿಲ್ಲಿಸಲು ಹೋದ ಪೊಲೀಸರ ಮೇಲೆ ಹಲ್ಲೆ ಮಾಡಿದ್ದರಿಂದ ಒಬ್ಬ ಪೊಲೀಸ್ ಪೇದೆಗೆ ಗಾಯಗಳಾಗಿವೆ. ಪ್ರಕರಣ ಸಂಬಂಧ ಇಬ್ಬರು ಯುವತಿಯರು ಹಾಗೂ ಮಂಜುನಾಥ ಮತ್ತು ಹರ್ಷ ಎಂಬುವರನ್ನು ಪೊಲೀಸರು ಬಂಧಿಸಿದ್ದಾರೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *