ದಾವಣಗೆರೆ: ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಹಿನ್ನೆಲೆ ಕಾರ್ಯಪಾಲಕ ಇಂಜಿನಿಯರ್ಗೆ ಜಿಲ್ಲಾ ವಿಶೇಷ ಲೋಕಾಯುಕ್ತ ನ್ಯಾಯಾಧೀಶರಾದ ರಾಜೇಶ್ವರಿ ಎನ್.ಹೆಗಡೆ ಅವರು 3 ವರ್ಷ ಶಿಕ್ಷೆ ಹಾಗೂ 1.25 ಕೋಟಿ ದಂಡ ವಿಧಿಸಿದ್ದಾರೆ.
ಹರಪನಹಳ್ಳಿ ತಾಲ್ಲೂಕು ಲಕ್ಷ್ಮೀಪುರ ಗ್ರಾಮದ ನಿವಾಸಿ, ಕೊಪ್ಪಳದಲ್ಲಿ ಕಾರ್ಯಪಾಲಕ ಇಂಜಿನಿಯರ್ ಆಗಿ ಕಾರ್ಯ ನಿರ್ವಹಿಸಿದ್ದ ಎಚ್. ಲಷ್ಕರ್ ನಾಯ್ಕಗೆ ದಂಡ ವಿಧಿಸಲಾಗಿದೆ.ಅಕ್ರಮ ಆಸ್ತಿ ಸಂಪಾದನೆ ಪ್ರಕರಣ ಪ್ರಕರಣ ಕುರಿತು ಲೋಕಾಯುಕ್ತ ಇನ್ಸ್ಪೆಕ್ಟರ್ ಸುಧೀರ್ ಎಂ. ಹೆಗಡೆ ಈ ಬಗ್ಗೆ ವರದಿ ನೀಡಿದ್ದರು. ಮನೆ ಮತ್ತು ಕಚೇರಿ ಮೇಲೆ ದಾಳಿ ಮಾಡಲಾಗಿತ್ತು. ಇನ್ಸ್ಪೆಕ್ಟರ್ ಗುರುದತ್, ರಾಮಚಂದ್ರ ಬೆಂತೂರ್ ತನಿಖೆ ನಡೆಸಿದ್ದರು. ಆರೋಪಿ ಲಷ್ಕರಿ ನಾಯ್ಕ್ ಅಕ್ರಮ ಆಸ್ತಿ ಸಂಪಾದಿಸಿದ್ದಾರೆ ಎಂದು ದೋಷಾರೋಪ ಪಟ್ಟಿ ಸಲ್ಲಿಸಿದ್ದರು.



