ಏಸು ಪ್ರತಿಮೆ ಸರ್ಕಾರಿ ಜಾಗ ಮಂಜೂರಾತಿ ಬಗ್ಗೆ ತನಿಖೆ: ಕಾನೂನು ಸಚಿವ ಮಾಧುಸ್ವಾಮಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

 ಡಿವಿಜಿ ಸುದದ್ದಿ, ಉಡುಪಿ: ರಾಮನಗರ ಜಿಲ್ಲೆಯಲ್ಲಿ ಏಸುಸ್ವಾಮಿ ಪ್ರತಿಮೆಗೆ ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಸರಕಾರಿ ಜಮೀನು ನೀಡಿರುವ ಸುದ್ದಿ ಸಖತ್ ವೈರಲ್ ಆಗ್ತಿದೆ. ಈ ಬಗ್ಗೆ ಕಾನೂನು ಸಚಿವ ಮಾಧುಸ್ವಾಮಿ ಉಡುಪಿಯಲ್ಲಿ ಪ್ರತಿಕ್ರಿಯಿಸಿದ್ದು, ಸರ್ಕಾರಿ ಜಮೀನು ಮಂಜೂರಾತಿ ಬಗ್ಗೆ ಮೊದಲು ತನಿಖೆ ಆಗಬೇಕು ಎಂದರು.

2014 ರಿಂದ 18ರ ಅವಧಿಯಲ್ಲಿ  ಸಿದ್ದರಾಮಯ್ಯ ಸಿಎಂ ಆಗಿದ್ದಾಗ, ಸರ್ಕಾರಿ ಜಮೀನು ಮಂಜೂರು ಆದ ಬಗ್ಗೆ ತನಿಖೆಗೆ ತರಬೇಕು. ಬಗರ್ ಹುಕುಂ ಜಮೀನು ಬಗ್ಗೆ ಕೂಡಾ ತನಿಖೆಯಾಗಬೇಕು. ನಾನೇ ಈ ಬಗ್ಗೆ ವಿಧಾನಸಭೆಯಲ್ಲಿ ಪ್ರಶ್ನೆ ಕೇಳಿದ್ದೆ ಎಂದರು.

2017-18ರ  ಅವರಧಿಯಲ್ಲಿ ಬೇಕಾಬಿಟ್ಟಿ ಸರ್ಕಾರಿ ಜಮೀನು ಹಂಚಿಕೆಯಾಗಿದೆ. ಜಮೀನು ಮಂಜೂರಾಗಿರುವಾಗ ಸಾಕಷ್ಟು ಪಕ್ಷಪಾತವಾಗಿದೆ. ಈ ಬಗ್ಗೆ ತನಿಖೆ ನಡೆಸಲು ಎಸಿಗೆ ವಹಿಸಲಾಗಿದೆ ಎಂದು ಹೇಳಿದರು.

ವಿಧಾನಸಭೆಯಲ್ಲೂ ಈ ಬಗ್ಗೆ ಚರ್ಚೆಯಾಗಿದೆ. ಎಸಿಯಿಂದ ಬಂದ  ವರದಿ ನೋಡಿ ಕ್ರಮ ಕೈಗೊಳ್ಳುತ್ತೇವೆ. ಶಿವಮೊಗ್ಗ, ಬೆಂಗಳೂರು, ತುಮಕೂರಲ್ಲಿಯೂ ಜಮೀನು ಹಂಚಿಕೆಯಾಗಿದೆ. ಅಲ್ಲೂ ಸ್ವಜನಪಕ್ಷಪಾತವಾದ ಬಗ್ಗೆ ಆರೋಪಗಳಿವೆ ಈ ಬಗ್ಗೆ ಕೂಡಾ ತನಿಖೆ ನಡೆಸುತ್ತೇವೆ ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *