ದಾವಣಗೆರೆ: ಮಹಾನಗರ ಪಾಲಿಕೆ ವ್ಯಾಪ್ತಿಯ ವಾರ್ಡ್ ನಂ 19 ರಲ್ಲಿನ ಕೆ. ಆರ್ ಮಾರುಕಟ್ಟೆ ಮಳಿಗೆಗಳ ದಾಖಲೆ ಪರಿಶಿಲನೆಗೆ ಬಾಡಿಗೆದಾರರಿಂದ ಅರ್ಜಿ ಆಹ್ವಾನಿಸಲಾಗಿದೆ. ಪಾಲಿಕೆ ಮಾಲಿಕತ್ವದ ಕೆ.ಆರ್ ಮಾರುಕಟ್ಟೆಯನ್ನು ಪುನರ್ ನಿರ್ಮಾಣ ಮಾಡಲಾಗಿದ್ದು, ಈ ಹಿಂದೆ ಮಾರುಕಟ್ಟೆಯಲ್ಲಿದ್ದ ಬಾಡಿಗೆದಾರರ ಮಳಿಗೆಗೆ ಸಂಬಂಧಿಸಿದ ಕರಾರು ದಾಖಲೆಗಳು, ಬಾಡಿಗೆ ಪಾವತಿಸಿದ ದಾಖಲೆಗಳ ಪರಿಶಿಲನೆಗೆ ಮುಂದಾಗಿದ್ದು, ಬಾಡಿಗೆದಾರರು ಅರ್ಜಿಗಳನ್ನು ಬೆಳಿಗ್ಗೆ 10 ರಿಂದ ಮಧ್ಯಾಹ್ನ 1.30 ವರೆಗೆ ಕೆ.ಆರ್ ಮಾರುಕಟ್ಟೆಯಲ್ಲಿನ ಪಾಲಿಕೆ ಸಿಬ್ಬಂದಿಯಿಂದ ಪಡೆದು ಮುಂದಿನ 7 ದಿನಗಳೊಳಗಾಗಿ ಮಳಿಗೆಗೆ ಸಂಬಂಧಿಸಿದ ಎಲ್ಲಾ ದಾಖಲೆಗಳೊಂದಿಗೆ ಅರ್ಜಿಗಳನ್ನು ಸಲ್ಲಿಸಲು ಮಹಾನಗರ ಪಾಲಿಕೆ ಆಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ದಾವಣಗೆರೆ: ಮಹಾನಗರ ಪಾಲಿಕೆಯ ಕೆ.ಆರ್ ಮಾರುಕಟ್ಟೆ ಮಳಿಗೆ ಬಾಡಿಗೆ ಪಡೆಯಲು ಅರ್ಜಿ ಆಹ್ವಾನ; 7 ದಿನದೊಳಗೆ ಅರ್ಜಿ ಸಲ್ಲಿಸಿ..!
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



