ಡಿವಿಜಿ ಸುದ್ದಿ, ಬೆಂಗಳೂರು: ಪ್ರತಿಭಟನೆ ವೇಳೆ ಸಾರ್ವಜನಿಕ ಆಸ್ತಿಗೆ ಹಾನಿಯುಂಟು ಮಾಡುವವರ ಆಸ್ತಿಯನ್ನು ಮುಟ್ಟುಗೋಲು ಹಾಕಿಕೊಳ್ಳುವ ಉತ್ತರ ಪ್ರದೇಶ ಸರ್ಕಾರದ ನಿಯಮವನ್ನು ಕರ್ನಾಟಕದಲ್ಲಿ ಜಾರಿಗೆ ತರುವ ಬಿಜೆಪಿ ಸರ್ಕಾರದ ಚಿಂತನೆ ವಿರುದ್ಧ ವಿಪಕ್ಷ ನಾಯಕ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.
ಆಸ್ತಿ ಮುಟ್ಟುಗೋಲು ಟ್ವೀಟ್ ಮಾಡಿರುವ ಸಿದ್ದರಾಮಯ್ಯ, ‘ರಾಜ್ಯದ ಬಿಜೆಪಿ ಸರ್ಕಾರ ಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಚಿಂತನೆ ನಡೆಸಿದೆಯಂತೆ. ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ ಹಿಂದಿನ ಗಲಭೆಗಳಲ್ಲಿ ಆರೋಪಿಗಳಾಗಿರುವ ಬಿಜೆಪಿ ನಾಯಕರ ಮೇಲೂ ಕ್ರಮಕೈಗೊಳ್ಳಲು ಸರ್ಕಾರ ಸಿದ್ದ ಇದೆಯೇ?’ ಎಂದು ಪ್ರಶ್ನೆ ಕೇಳಿದ್ದಾರೆ.
ರಾಜ್ಯದ @BJP4Karnataka ಸರ್ಕಾರ ಗಲಭೆಕೋರರ ಆಸ್ತಿಯನ್ನು ಮುಟ್ಟುಗೋಲು ಹಾಕಲು ಚಿಂತನೆ ನಡೆಸಿದೆಯಂತೆ.
ಇದನ್ನು ಪೂರ್ವಾನ್ವಯವಾಗಿ ಜಾರಿಗೊಳಿಸಿ ಹಿಂದಿನ ಗಲಭೆಗಳಲ್ಲಿ ಆರೋಪಿಗಳಾಗಿರುವ ಬಿಜೆಪಿ ನಾಯಕರ ಮೇಲೂ ಕ್ರಮಕೈಗೊಳ್ಳಲು ಸರ್ಕಾರ ಸಿದ್ದ ಇದೆಯೇ?
— Siddaramaiah (@siddaramaiah) December 27, 2019
ಪೌರತ್ವ ತಿದ್ದುಪಡಿ ಕಾಯ್ದೆ ಹೋರಾಟದ ವೇಳೆ ಸಾರ್ವಜನಿಕರ ಆಸ್ತಿ ಹಾನಿಯುಂಟು ಮಾಡಿದವರ ಆಸ್ತಿ ಮುಟ್ಟುಗೋಲು ಹಾಕಿಕೊಳ್ಳಲು ಉತ್ತರ ಪ್ರದೇಶ ಸರ್ಕಾರ ನಿರ್ಧಾರ ಕೈಗೊಂಡಿತು. ಇದೇ ನಿಯಮವನ್ನೇ ಪಾಲಿಸಲು ರಾಜ್ಯ ಸರ್ಕಾರವು ಚಿಂತಿಸುತ್ತಿದೆ ಎಂದು ಸಚಿವರಾದ ಸಿಟಿ ರವಿ, ಆರ್ . ಅಶೋಕ್ ಹೇಳಿದ್ದರು. ಈ ಹಿನ್ನೆಯಲ್ಲೇ ಸಿದ್ದರಾಮಯ್ಯ ಅವರು ಟ್ವೀಟ್ ಮಾಡಿದ್ದಾರೆ.



