ಡಿವಿಜಿ ಸುದ್ದಿ, ಮಂಗಳೂರು: ಇತ್ತೀಚೆಗೆ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ನಡೆದ ಪ್ರತಿಭಟನೆಯ ಗೋಲಿಬಾರ್ನಲ್ಲಿ ಮೃತಪಟ್ಟಿದ್ದ ಇಬ್ಬರ ಕುಟುಂಬಗಳಿಗೆ ತೃಣಮೂಲ ಕಾಂಗ್ರೆಸ್ ನಿಂದ ಇಂದು ತಲಾ 5 ಲಕ್ಷ ರೂಪಾಯಿ ಮೊತ್ತದ ಪರಿಹಾರ ಚೆಕ್ ವಿತರಿಸಲಾಯಿತು.
ಮಾಜಿ ರೈಲ್ವೆ ಸಚಿವ ದಿನೇಶ್ ತ್ರಿವೇದಿ ಮತ್ತು ರಾಜ್ಯಸಭಾ ಸದಸ್ಯ ಎಂ.ಡಿ.ನದೀಮ್ ಉಲ್ ಹಕ್ ನೇತೃತ್ವದ ನಿಯೋಗ ಪರಿಹಾರ ವಿತರಿಸಿತು.
ತನಿಖೆ ಸಂಪೂರ್ಣ ಆಗುವರೆಗೂ ಮೃತರ ಕುಟುಂಬಗಳಿಗೆ ಘೋಷಿಸಿದ್ದ 10 ಲಕ್ಷ ಮೊತ್ತದ ಪರಿಹಾರ ವಿತರಿಸಲು ಸಾಧ್ಯವಿಲ್ಲಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಹೇಳಿದ್ದರು. ಇದಕ್ಕೆ ಪ್ರತಿಯಾಗಿ ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ, ತಮ್ಮ ತೃಣಮೂಲ ಕಾಂಗ್ರೆಸ್ ಪಕ್ಷದಿಂದ 5 ಲಕ್ಷ ಮೊತ್ತದ ಪರಿಹಾರ ಘೋಷಿಸಿದ್ದರು. ಮಹಾನಗರ ಪಾಲಿಕೆ ಸದಸ್ಯರಾದ ಲತೀಫ್ ಕಂದಕ್, ಶಂಸುದ್ದೀನ್ ಕುದ್ರೋಳಿ ಉಪಸ್ಥಿತರಿದ್ದರು.



