ದಾವಣಗೆರೆ: ಅಬಕಾರಿ ಇಲಾಖೆ ಭರ್ಜರಿ ಕಾರ್ಯಾಚರಣೆ; ಮನೆಯೊಂದಲ್ಲಿ ಅಕ್ರಮ ಮದ್ಯ ಸಂಗ್ರಹಿಸಿದ್ದ ಒಬ್ಬ ಆರೋಪಿ ಬಂಧನ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ದಾವಣಗೆರೆ ಹೊರ ವಲಯದ ಮನೆಯೊಂದರಲ್ಲಿ ಅಕ್ರಮ ಮದ್ಯ ಮತ್ತು ಪಾಪಿಸ್ಟ್ರಾ ಪೌಡರ್ ಸಂಗ್ರಹಿಸಿದ ಖಚಿತ ಮಾಹಿತಿ ಮೇರೆಗೆ ದಾಳಿ ಮಾಡಿದ ಅಬಕಾರಿ ಇಲಾಖೆ ಅಧಿಕಾರಿಗಳು, ಒಬ್ಬ ಆರೋಪಿಯನ್ನು ಬಂಧಿಸಿ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ.

ನಗರದ ಹೊರ ವಲಯದ ಗ್ರೀನ್ ಪಾಯಿಂಟ್ ಡಾಬಾ ಬಳಿಯ ಮನೆಯೊಂದರ ಮೇಲೆ ದಾಳಿ ಮಾಡಿದ್ದು, ಅಕ್ರಮವಾಗಿ ಸಂಗ್ರಹಿಸಿದ್ದ 54 ಸಾವಿರ ಮೌಲ್ಯದ ಮದ್ಯ ಹಾಗೂ18 ಕೆಜಿ ಪಾಪಿಸ್ಟ್ರಾ ಪೌಡರ್ ವಶಕ್ಕೆ ಪಡೆಯಲಾಗಿದೆ. ಮನೆಯಲ್ಲಿ ಸಂಗ್ರಹಿಸಿದ್ದ ಅವತಾರ್ ಸಿಂಗ್ ಎಂಬ ವ್ಯಕ್ತಿ ಮಾರಾಟ ಮಾಡುತ್ತಿದ್ದ, ಈ ಬಗ್ಗೆ ನಿಖರ ಮಾಹಿತಿ ಮೇರೆಗೆ ದಾಳಿ ನಡೆದಿದೆ. ಅಬಕಾರಿ ಅಯುಕ್ತರ ಮಾರ್ಗದರ್ಶನದಲ್ಲಿ ಅಬಕಾರಿ ಡಿವೈಎಸ್ ಪಿ ರವಿ ಎಂ ಮರಿಗೌಡ ನೇತೃತ್ವದಲ್ಲಿ ದಾಳಿ ನಡೆದಿದೆ. ಈ ಬಗ್ಗೆ ಆರೋಪಿ ವಿರುದ್ಧ ಪ್ರಕರಣ ದಾಖಲಿಸಿ ಆರೋಪಿ ಬಂಧಿಸಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *