Connect with us

Dvgsuddi Kannada | online news portal | Kannada news online

ದಾವಣಗೆರೆ; ಹೊಂಚು ಹಾಕಿ‌ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ..!

death

ದಾವಣಗೆರೆ

ದಾವಣಗೆರೆ; ಹೊಂಚು ಹಾಕಿ‌ ನಡು ರಸ್ತೆಯಲ್ಲಿ ಚಾಕುವಿನಿಂದ ಇರಿದು ಯುವಕನ ಕೊಲೆ..!

ದಾವಣಗೆರೆ: ಹೊಂಚು ಹಾಕಿ‌ ಕುಳಿತ ಗ್ಯಾಂಗ್ ನಿಂದ ನಡು ರಸ್ತೆಯಲ್ಲಿಯೇ ಯುವಕ ಭೀಕರ ಕೊಲೆ ನಡೆದಿದೆ. ಗೋಮಾಳ ಜಮೀನು ವಿಚಾರವಾಗಿ ಗಾಂಧಿನಗರ ಠಾಣೆ ವ್ಯಾಪ್ತಿಯ ಚೌಡೇಶ್ವರಿ ನಗರದಲ್ಲಿ ವ್ಯಕ್ತಿಯೊಬ್ಬರನ್ನು ಚಾಕುವಿನಿಂದ ಇರಿದು ಕೊಲೆ ಮಾಡಲಾಗಿದೆ. ದಾವಣಗೆರೆ ತಾಲ್ಲೂಕಿನ ಕಿತ್ತೂರು ಗ್ರಾಮದ ನಿವಾಸಿ ಮೈಲಾರಿ (28) ಕೊಲೆಯಾದ ವ್ಯಕ್ತಿ.

ಕಿತ್ತೂರು ಗ್ರಾಮದಲ್ಲಿ 6 ಎಕರೆ ಗೋಮಾಳ ಜಮೀನು ವಿಚಾರವಾಗಿ ಜಗಳವಾಗಿದ್ದು, ಸಂಬಂಧಿಕರು ಜಗಳವಾಡಿದ್ದರು. ಈ ಜಗಳ ಕೊಲೆಯಲ್ಲಿ ಅಂತ್ಯವಾಗಿರುವ ಶಂಕೆ ವ್ಯಕ್ತವಾಗಿದೆ‌. ಜಮೀನಿನಲ್ಲಿ ನಮ್ಮ ಪಾಲು ಇದೇ ಎಂದು ಸಂಬಂಧಿಗಳು ಇತ್ತೀಚೆಗೆ ಗ್ರಾಮದ ಮೈಲಾರಲಿಂಗೇಶ್ವರ ಜಾತ್ರೆ ವೇಳೆ ಗಲಾಟೆ ಮಾಡಿದ್ದರು.

ಮೈಲಾರಿ, ಕಾರ್ಮಿಕರನ್ನು ಪೂರೈಕೆ ಮಾಡುತ್ತಿದ್ದರು.‌ ಈತನಿಗಾಗಿ ಆರೋಪಿಗಳು ಹಲವು ದಿನದಿಂದ ಕಾಯುತ್ತಿದ್ದರು. ಭಾನುವಾರ ಸಂಜೆ ಚೌಡೇಶ್ವರಿ ನಗರಕ್ಕೆ ಬರುತ್ತಿದ್ದಂತೆಯೇ ಹೊಂಚು ಹಾಕಿ ನಡು ‌ರಸ್ತೆಯಲ್ಲಿ ಚಾಕುವಿನಿಂದ ಇರಿದಿದ್ದಾರೆ. ಗಾಯಗೊಂಡ ಮೈಲಾರಿಯನ್ನು ಆಸ್ಪತ್ರೆಗೆ ಸಾಗಿಸುವ ವೇಳೆ ಮೃತಪಟ್ಟಿದ್ದಾರೆ. ಗಾಂಧಿನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಆರೋಪಿಗಳ ಪತ್ತೆಗೆ ಪೊಲೀಸರು ಹುಡುಕಾಟ ನಡೆಸುತ್ತಿದ್ದಾರೆ‌.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top