ಡಿವಿಜಿ ಸುದ್ದಿ, ಬೆಂಗಳೂರು: ಉಡುಪಿಯ ಪೇಜಾವರ ಶ್ರೀಗಳು ವಿದ್ಯಾಪೀಠದ ಶ್ರೀ ಕೃಷ್ಣನ ಸನ್ನಿಧಾನದ ಪಕ್ಕದಲ್ಲೇ ಬೃಂದಾವನ ಪ್ರವೇಶ ಮಾಡಿದ್ದಾರೆ. ಇಂದಿನಿಂದ ಭಕ್ತರು ಶ್ರೀಗಳ ಬೃಂದಾವನ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ.

ಪೂರ್ಣ ಪ್ರಜ್ಞಾ ವಿದ್ಯಾಪೀಠದ ಕಾರ್ಯದರ್ಶಿ ಕೇಶವ ಚಾರ್ಯ ಮಾತನಾಡಿ, ಭಾನುವಾರ ಉಡುಪಿ ಭಾಗದ ಮಧ್ವ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಿದೆ. ರಾತ್ರಿಯಲ್ಲ ಅವರ ಬೃಂದಾವನ ಪ್ರವೇಶ ಆಗಿದ್ದು, ಭಜನೆ-ಆರಾಧನೆ ನಡೆದಿದೆ. ಹೀಗಾಗಿ ಇಂದಿನಿಂದ ಶ್ರೀಗಳ ಬೃಂದಾವನ ದರ್ಶನ ಮಾಡಬಹುದು ಎಂದು ತಿಳಿಸುದರು.
12 ನೇ ದಿನಕ್ಕೆ ವಿಶೇಷ ಮಹಾಸಮಾರಾಧನೆ
ಇಂದಿನಿಂದ ಪ್ರತಿನಿತ್ಯ ಪಾಯಶ್ಚಿತ ಹೋಮ, ಪವಿತ್ರಯಾಗ, ಪುಷ್ಪಾರ್ಣ ಯಾಗ, ಇತ್ಯಾದಿ ಶಾಂತಿ ಹೋಮ, ಯಾಗಗಳು ನಡೆಯಲಿವೆ. 12ನೇ ದಿನಕ್ಕೆ ವಿಶೇಷ ಮಹಾಸಮಾರಾಧನೆ ನಡೆಯುತ್ತೆ. ಪರಮಪೂಜ್ಯ ವಿಶ್ವ ಪ್ರಸನ್ನ ಅವರ ನೇತೃತ್ವದಲ್ಲಿ ಅವರ ಆದೇಶದಂತೆ ಸತ್ಕಾರ್ಯಗಳು ನಡೆಯಲಿವೆ. ಬೃಂದಾವನ ನಿರ್ಮಾಣ ಮಾಡೋದಕ್ಕೆ ಒಂದೂವರೆ ವರ್ಷ ಬೇಕಾಗಿತ್ತೆ. ಇದು ತಾತ್ಕಾಲಿಕ ಬೃಂದಾವನವಾಗಿದ್ದು, ಪ್ರತಿದಿನ ಪೂಜೆ ಪುನಸ್ಕಾರಗಳು ನಡೆಯಲಿವೆ ಎಂದು ತಿಳಿಸಿದ್ದಾರೆ.



