ದಾವಣಗೆರೆ; ರಾತ್ರಿ ವೇಳೆ ಬೈಕ್ ನಲ್ಲಿ ಬೆಂಗಳೂರಿಗೆ ಹೋಗುತ್ತಿದ್ದ ದಾವಣಗೆರೆ ಮೂಲದ ಯುವಕ ರಸ್ತೆ ಡಿವೈಡರ್ ಗೆ ಡಿಕ್ಕಿ ಹೊಡೆದು ಸಾವನ್ನಪ್ಪಿದ್ದಾನೆ. ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಕಂಚಿಕೊಪ್ಪ ಗ್ರಾಮದ ಮೃತ ಯುವಕನಾಗಿದ್ದಾನೆ.
ಕಂಚಿಕೊಪ್ಪ ಗ್ರಾಮದ ಅರುಣಾಚಾರ್ (22) ಸಾವನ್ನಪ್ಪಿದ ಯುವಕ. ರಾತ್ರಿ ವೇಳೆ ಬೈಕ್ ನಲ್ಲಿ ಬೆಂಗಳೂರಿಗೆ ಅಕ್ಕನ ಮನೆಗೆ ಹೋಗುತ್ತಿದ್ದಾಗ ತಿಪಟೂರು ಬಳಿ ಅಪಘಾತ ಸಂಭವಿಸಿದೆ. ರಸ್ತೆ ಅಭಿವೃದ್ಧಿ ಕಾಮಗಾರಿ ನಡೆಯುತ್ತಿದ್ದ ವೇಳೆ ಡಿವೈಡರ್ ಡಿಕ್ಕಿ ಹೊಡೆದು ಯುವಕ ಮೃತಪಟ್ಟಿದ್ದಾರೆ. ಈ ಬಗ್ಗೆ ಪ್ರಕರಣ ದಾಖಲಾಗಿದೆ.



