ದಾವಣಗೆರೆ: ಭದ್ರಾ ನಾಲೆಯಲ್ಲಿ ಕೊಳೆತ ಸ್ಥಿತಿಯ ಅನಾಮಧೇಯ ಶವ ಪತ್ತೆಯಾಗಿದೆ. ಜಿಲ್ಲೆಯ ಹರಿಹರ ತಾಲ್ಲೂಕಿನ ಮಲೇಬೆನ್ನೂರು ಬಳಿಯ ನಿಟ್ಟೂರು ಗ್ರಾಮದ ಭದ್ರಾ ಉಪನಾಲೆಯಲ್ಲಿ ಶವ ಪತ್ತೆಯಾಗಿದ್ದು, ಮೃತದೇಹ ನೀರಿನಲ್ಲಿರುವ ಹಿನ್ನೆಲೆ ಜಲಚರಗಳು ಮೃತದೇಹವನ್ನು ತಿಂದು ಹಾಕಿವೆ. ಮೃತದೇಹ ಗುರುತು ಪತ್ತೆಯಾಗಿಲ್ಲ.
ಶವ ಕೊಳೆತ ಸ್ಥಿತಿಯಲ್ಲಿ ಇರುವುದರಿಂದ ಇನ್ನೂ ಗುರುತು ಪತ್ತೆಯಾಗಿಲ್ಲ. ಹೀಗಾಗಿ ಶವದ ಗುರುತು ಪತ್ತೆಗಾಗಿ ಪೊಲೀಸರು ಫಲಕ ಬಿಡುಗಡೆ ಮಾಡಿದ್ದಾರೆ. ಮಲೇಬೆನ್ನೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.



