Connect with us

Dvgsuddi Kannada | online news portal | Kannada news online

ದಾವಣಗೆರೆ: ಅಡಿಕೆ ಬೆಳೆಗಾರರಿಗೆ ಮತ್ತಷ್ಟು ಖುಷಿ; ಮತ್ತೆ ಬೆಲೆ ಏರಿಕೆ- ಸತತ ಒಂದು ವಾರದಿಂದ ದರ ಹೆಚ್ಚಳ

ದಾವಣಗೆರೆ

ದಾವಣಗೆರೆ: ಅಡಿಕೆ ಬೆಳೆಗಾರರಿಗೆ ಮತ್ತಷ್ಟು ಖುಷಿ; ಮತ್ತೆ ಬೆಲೆ ಏರಿಕೆ- ಸತತ ಒಂದು ವಾರದಿಂದ ದರ ಹೆಚ್ಚಳ

ದಾವಣಗೆರೆ: ಜಿಲ್ಲೆಯ ಪ್ರಮುಖ ವಾಣಿಜ್ಯ ಬೆಳೆಯಾದ ಅಡಿಕೆ ಧಾರಣೆಯಲ್ಲಿ ಮತ್ತೆ ಚೇತರಿಕೆ ಕಂಡಿದೆ. ಒಂದು ವಾರದಿಂದ ಸತತ ಬೆಲೆ ಏರಿಕೆಯಾಗುತ್ತಿದೆ.‌ ಇದರಿಂದ ರೈತರಲ್ಲಿ ಮತ್ತಷ್ಟು ಸಂತಸ ಉಂಟು ಮಾಡಿದೆ. ದಿನದ ವಹಿವಾಟಿನ ಏರಿಳಿತ ನಡುವೆಯೇ ಜಿಲ್ಲೆಯಲ್ಲಿ ಇಂದು (ಫೆ.27) ಪ್ರತಿ ಕ್ವಿಂಟಾಲ್ ಗೆ ಗರಿಷ್ಠ 46,381 ರೂ.ಗೆ ಮಾರಾಟವಾಗಿದೆ. ಈ ಮೂಲಕ ಹಿಂದಿನ ಮೂರ್ನಾಲ್ಕು ದಿನದ ಮಾರುಕಟ್ಟೆಗೆ ಹೊಲಿಸಿದ್ರೆ ಬೆಲೆಯಲ್ಲಿ 700ರೂ.ಗಳಷ್ಟು ಏರಿಕೆ ಆಗಿದೆ.

ಜಿಲ್ಲೆಯ ಪ್ರಮುಖ ಮಾರುಕಟ್ಟೆಯಾದ ಚನ್ನಗಿರಿಯಲ್ಲಿ ಉತ್ತಮ ರಾಶಿ ಅಡಿಕೆ ಪ್ರತಿ ಕ್ವಿಂಟಾಲ್ ಗೆ ದರ 46381 ಗರಿಷ್ಠ ಬೆಲೆ ದಾಖಲಾಗಿದೆ. ನಿನ್ನೆ ಕ್ವಿಂಟಾಲ್ ಗೆ ಗರಿಷ್ಠ 46,299 ರೂ. ದಾಖಲಾಗಿತ್ತು. 2nd ಬೆಟ್ಟೆ ಅಡಿಕೆ ಗರಿಷ್ಠ 31,479 ಬೆಲೆಗೆ ಮಾರಾಟವಾಗಿದೆ.

ಫೆ.27ರಂದು ಉತ್ತಮ ರಾಶಿಯ ಕನಿಷ್ಠ ಬೆಲೆ‌ 44,069 ಆಗಿದ್ದು, ಗರಿಷ್ಠ ಬೆಲೆ 46,381 ಹಾಗೂ ಸರಾಸರಿ ಬೆಲೆ 45,854 ಆಗಿದೆ. ಇನ್ನೂ 2nd ಬೆಟ್ಟೆ ಅಡಿಕೆ ಬೆಲೆ ಕನಿಷ್ಠ ಬೆಲೆ 28,679, ಗರಿಷ್ಠ ಬೆಲೆ 31,479 ಹಾಗೂ ಸರಾಸರಿ ಬೆಲೆ 30,079 ಆಗಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top