ದಾವಣಗೆರೆ: ತಲೆಗೆ ಕಟ್ಟಿಗೆಯಿಂದ ಹೊಡೆದು ಯುವಕನನ್ನು ಭೀಕರವಾಗಿ ಕೊಲೆ ಮಾಡಲಾಗಿದ್ದು, ಹಳೇ ವೈಷಮ್ಯದಿಂದ ಹತ್ಯೆ ನಡೆದಿರುವ ಶಂಕೆ ವ್ಯಕ್ತವಾಗಿದೆ.
ನಗರದ ಕಬ್ಬೂರು ಬಸಪ್ಪ ಬಡಾವಣೆಯಲ್ಲಿ ಕೊಲೆ ನಡೆದಿದ್ದು, ಪ್ರಶಾಂತ (29) ಕೊಲೆಯಾದ ಯುವಕನಾಗಿದ್ದಾನೆ. ಕಟ್ಟಿಗೆಯಿಂದ ತಲೆಗೆ ಬೀಕರವಾಗಿ ಹೊಡೆದಿದ್ದರಿಂದ ತೀವ್ರ ಪೆಟ್ಟಾಗಿ ಸ್ಥಳದಲ್ಲಿಯೇ ಪ್ರಶಾಂತ ಮೃತಪಟ್ಟಿದ್ದಾನೆ. ಕಬ್ಬೂರು ಬಸಪ್ಪ ನಗರದ ಎಲವಟ್ಟಿ ರೈಸ್ ಮಿಲ್ ಬಳಿ ಶವ ಪತ್ತೆಯಾಗಿದೆ. ಘಟನಾ ಸ್ಥಳಕ್ಕೆ ನಗರ ಡಿವೈಎಸ್ಪಿ ಮಲ್ಲೇಶ್ ದೊಡ್ಡಮನಿ ಭೇಟಿ ಪರಿಶೀಲನೆ ನಡೆಸಿದ್ದಾರೆ. ಆರ್ ಎಂಸಿ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



