ದಾವಣಗೆರೆ: ತೋಟದಿಂದ ಮನೆಗೆ ಬರುವಾಗ ಟಿಪ್ಪರ್ ಲಾರಿಯೊಂದು ಕಾರಿಗೆ ಡಿಕ್ಕಿ ಹೊಡೆದ ಪರಿಣಾಮ ಜಿಲ್ಲೆಯ ಚನ್ನಗಿರಿ ತಾಲ್ಲೂಕು ವೈದ್ಯಾಧಿಕಾರಿ ಗಂಭೀರ ಗಾಯಗೊಂಡಿದ್ದಾರೆ.
ಚನ್ನಗಿರಿ ಪಟ್ಟಣದ ಸರ್ಕಾರಿ ವೈದ್ಯಾಧಿಕಾರಿ ಡಾ. ಅಜ್ಜಪ್ಪ ಗಂಭೀರವಾಗಿ ಗಾಯಗೊಂಡಿದ್ದಾರೆ. ತೋಟದಿಂದ ಮನೆಗೆ ಬರುವಾಗ ತಾಲ್ಲೂಕಿನ ತಾವರೆಕೆರೆ ಸಮೀಪದ ಬಕ್ಕಾಂಬೂದಿ ಹತ್ತಿರ ಈ ಘಟನೆ ನಡೆದಿದೆ. ಬೃಹತ್ ಟಿಪ್ಪರ್ ರಭಸವಾಗಿ ಕಾರಿಗೆ ಡಿಕ್ಕಿ ಹೊಡೆದಿದ್ದರಿಂದ ಸಂಪೂರ್ಣ ಜಖಂಗೊಂಡಿದೆ. ತೀವ್ರವಾಗಿ ಗಾಯಗೊಂಡಿದ್ದ ವೈದ್ಯಾಧಿಕಾರಿ ಡಾ. ಅಜ್ಜಪ್ಪ ಅವರನ್ನು ತೀವ್ರ ನಿಗಾ ಘಟಕದಲ್ಲಿ ದಾಖಲಿಸಲಾಗಿದೆ.



