Connect with us

Dvgsuddi Kannada | online news portal | Kannada news online

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ; ಚನ್ನಗಿರಿ, ದಾವಣಗೆರೆಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ;  ರಾಜೀನಾಮೆಗೆ ಆಗ್ರಹ

madal 4

ಪ್ರಮುಖ ಸುದ್ದಿ

ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರನ ಲಂಚ ಪ್ರಕರಣ; ಚನ್ನಗಿರಿ, ದಾವಣಗೆರೆಯಲ್ಲಿ ಕಾಂಗ್ರೆಸ್ ಬೃಹತ್ ಪ್ರತಿಭಟನೆ;  ರಾಜೀನಾಮೆಗೆ ಆಗ್ರಹ

 ದಾವಣಗೆರೆ: ಚನ್ನಗಿರಿ ಶಾಸಕ ಶಾಸಕ ಮಾಡಾಳ್ ವಿರೂಪಾಕ್ಷಪ್ಪ ಪುತ್ರ ಪ್ರಶಾಂತ್  ಕಚೇರಿ ಹಾಗೂ ಮನೆಯಲ್ಲಿ ಕೋಟ್ಯಂತರ ಹಣ ಪತ್ತೆ ಹಿನ್ನಲೆ ಕಾಂಗ್ರೆಸ್ ಪಕ್ಷದಿಂದ ಚನ್ನಗಿರಿ, ದಾವಣಗೆರೆ ಬೃಹತ್ ಪ್ರತಿಭಟನೆ ನಡೆಸಲಾಯಿತು. ಪ್ರತಿಭಟನೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಭಾವಚಿತ್ರ  ಬೆಂಕಿ ಇಟ್ಟು ಆಕ್ರೋಶ ವ್ಯಕ್ತಪಡಿಸಿದರು.

ಬಿಜೆಪಿಯೆಂದರೆ ಭ್ರಷ್ಟಾಚಾರ, 40 ಪರ್ಸಂಟೇಸ್ ಸರ್ಕಾರ. ಭ್ರಷ್ಟ ಸರ್ಕಾರ ಎನ್ನುವುದಕ್ಕೆ ಇದಕ್ಕಿಂತ ಸಾಕ್ಷಿ ಬೇಕಿಲ್ಲ.  ಶಾಸಕ ಸ್ಥಾನಕ್ಕೆ ಮಾಡಾಳ್ ವಿರೂಪಾಕ್ಷಪ್ಪ ಕೂಡಲೇ ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ನಾಯಕರು ಆಗ್ರಹಿಸಿದರು.

ಲೋಕಾಯುಕ್ತ ದಾಳಿ ವೇಳೆ 40 ಲಕ್ಷ ಲಂಚ ಸ್ಪೀಕರಿಸುವಾಗ ಚನ್ನಗಿರಿ ಶಾಸಕ ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಸಿಕ್ಕಿಹಾಕಿಕೊಂಡಿದ್ದಾರೆ. ಈ ವೇಳೆ ಕಚೇರಿಯಲ್ಲಿ 1.62 ಕೋಟಿ ರೂ., ಮನೆಯಲ್ಲಿ ಸುಮಾರು 6 ಕೋಟಿ ರೂ. ಸಿಕ್ಕಿದೆ. ಆದರೂ ಈ ಪ್ರಕರಣದಲ್ಲಿ ಶಾಸಕರನ್ನು ಬಂಧಿಸದೇ ಮೀನಾಮೇಷ ಎಣಿಸಲಾಗುತ್ತಿದೆ. ಇದು ಸರಿಯಲ್ಲ. ಎಲ್ಲೇ ಆಸ್ತಿ ಮಾಡಿದ್ದರೂ ಜಫ್ತಿ ಮಾಡಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಮಹಾನಗರ ಪಾಲಿಕೆ ವಿರೋಧ ಪಕ್ಷದ ನಾಯಕ ಗಡಿಗುಡಾಳ್ ಮಂಜುನಾಥ್,  ಪಾಲಿಕೆ ಸದಸ್ಯರಾದ ಪಾಮೇನಹಳ್ಳಿ ನಾಗರಾಜ್, ಕಲ್ಲಹಳ್ಳಿ ನಾಗರಾಜ್, ಎ. ನಾಗರಾಜ್, ಉತ್ತರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ. ಜಿ. ಶಿವಕುಮಾರ್, ಮೊಹಮ್ಮದ್ ಜಿಕ್ರಿಯಾ, ಮೊಯಿನುದ್ದೀನ್, ಮನು, ಭರತ್ ಮೈಲಾರಿ ಸೇರಿದಂತೆ ಕಾಂಗ್ರೆಸ್ ಮುಖಂಡರು, ಕಾರ್ಯಕರ್ತರು ಪಾಲ್ಗೊಂಡಿದ್ದರು.

ಇನ್ನು ಮಾಡಾಳ್ ವಿರೂಪಾಕ್ಷಪ್ಪರ ಪುತ್ರ ಪ್ರಶಾಂತ್ ಮಾಡಾಳ್ ಲಂಚಬಾಕತನದ ವಿರುದ್ಧ ಚನ್ನಗಿರಿ ಕಾಂಗ್ರೆಸ್ ಘಟಕ ಪ್ರತಿಭಟನೆ ನಡೆಸಿತು. ಮಾಜಿ ಶಾಸಕ ವಡ್ನಾಳ್ ರಾಜಣ್ಣರ ನೇತೃತ್ವದಲ್ಲಿ ಚನ್ನಗಿರಿ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನೆನಡೆಸಲಾಯಿತು.

ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಮಾಡಾಳ್ ವಿರೂಪಾಕ್ಷಪ್ಪ ಹಾಗೂ ಕುಟುಂಬದವರಿಗೆ ಜನರು ತಕ್ಕ ಪಾಠ ಕಲಿಸಲಿದ್ದಾರೆ. ಇಂತಹವರಿಂದ ಉತ್ತಮ ಆಡಳಿತ ಸಾಧ್ಯವೇ? ಕೂಡಲೇ ಮಾಡಾಳ್ ವಿರೂಪಾಕ್ಷಪ್ಪರು ಶಾಸಕ ಸ್ಥಾನಕ್ಕೆ ರಾಜೀನಾಮೆ ಕೊಡಬೇಕು. ಲೋಕಾಯುಕ್ತ ಪೊಲೀಸರು ಬಂಧಿಸಬೇಕು ಎಂದು ಆಗ್ರಹಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top