ದಾವಣಗೆರೆ: ಮಾರ್ಚ್ 12ರಂದು ಜಿಲ್ಲೆಯ ಹೊನ್ನಾಳಿಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಭೇಟಿ ನೀಡಲಿದ್ದಾರೆ. ಜಿಲ್ಲೆಯ ಹೊನ್ನಾಳಿ ತಾಲೂಕಿನ ಅರಬಗಟ್ಟೆ ಗ್ರಾಮ ವಸತಿ ಶಾಲೆ ಮೈದಾನದಲ್ಲಿ ನಡೆಯುವ 53 ಸಾವಿರ ಫಲಾನುಭವಿಗಳಿಗೆ ವಿವಿಧ ಇಲಾಖೆಯ ಸೌಲಭ್ಯ, ಹಕ್ಕುಪತ್ರ ವಿತರಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳಲಿದ್ದಾರೆ.
ದಾವಣಗೆರೆ, ವಿಜಯನಗರ, ಗದಗ, ಧಾರವಾಡ ಸೇರಿ 12 ಜಿಲ್ಲೆಗಳ 53 ಸಾವಿರ ಫಲಾನುಭವಿಗಳು ಸಮಾವೇಶದಲ್ಲಿ ಸೇರುವ ನಿರೀಕ್ಷೆ ಇದೆ. ಅಮಿತ್ ಶಾಗೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ಪ್ರಮುಖರು ಭಾಗವಹಿಸಲಿದ್ದಾರೆ.
ರಾಜ್ಯ ವಿಧಾನಸಭೆ ಚುನಾವಣೆ ಹಿನ್ನೆಲೆ ರಾಜ್ಯ ಬಿಜೆಪಿ ನಾಲ್ಕು ದಿಕ್ಕಿನಿಂದ ವಿಜಯ ಸಂಕಲ್ಪ ರಥಯಾತ್ರೆ ಪ್ರಾರಂಭಿಸಿದೆ. ಈ ವಿಜಯ ಸಂಕಲ್ಪ ರಥ ಯಾತ್ರೆ ಆರಂಭಿಸಿದೆ. ಬಿಜೆಪಿ ಹೈ ಕಮಾಂಡ್ ರಾಜ್ಯ ಪ್ರವಾಸ ಮಾಡುತ್ತಿದ್ದು, ಈ ಬಾರಿ ಪೂರ್ಣ ಬಹುಮತದೊಂದಿಗೆ ಅಧಿಕಾರ ಹಿಡಿಯಲು ಹೆಚ್ಚಿನ ಕಾರ್ಯಕ್ರಮ ಆಯೋಜಿಸಲಾಗುತ್ತಿದೆ.



