ದಾವಣಗೆರೆ: ಅತಿ ವೇಗದ ಚಾಲನೆಯಿಂದ ನಿಯಂತ್ರಣ ತಪ್ಪಿ ಗುಂಡಿಗೆ ಬಿದ್ದಿದ್ದ ಬೈಕ್ ಸವಾರ ಸಾವನ್ನಪ್ಪಿದ ಘಟನೆ ದಾವಣಗೆರೆಯಲ್ಲಿ ನಡೆದಿದೆ. ನಗರದ ಸಿದ್ದೇಶ್ವರ ಲೇ ಔಟ್ನಲ್ಲಿ ದ್ವಿಚಕ್ರ ವಾಹನದಿಂದ ಬಿದ್ದು ಗಾಯಗೊಂಡಿದ್ದ ಶ್ರೀರಾಮ ನಗರದ ಕರಿಯಮ್ಮ ದೇವಸ್ಥಾನದ ರಸ್ತೆ ನಿವಾಸಿ ಕುಮಾರಲಿಂಗ ಎನ್. (38) ಅವರು ಮೃತಪಟ್ಟಿದ್ದಾರೆ.
ಗುಂಡಿಗೆ ಬಿದ್ದು ಗಂಭೀರವಾಗಿ ಗಾಯಗೊಂಡಿದ್ದ ಅವರನ್ನು ಇಲ್ಲಿನ ಎಸ್.ಎಸ್. ಆಸ್ಪತ್ರೆಗೆದಾಖಲಿಸಲಾಗಿತ್ತು. ದಕ್ಷಿಣ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.



