ದಾವಣಗೆರೆ: ಎಸ್ಸೆಸ್ಸೆಲ್ಸಿ ಪರೀಕ್ಷೆ; ಮೊದಲ ದಿನ 155 ವಿದ್ಯಾರ್ಥಿಗಳು ಗೈರು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ರಾಜ್ಯಾದ್ಯಂತ ಎಸ್ಸೆಸ್ಸೆಲ್ಸಿ ಪರೀಕ್ಷೆ ಪ್ರಾರಂಭವಾಗಿದ್ದು, ಮೊದಲ ಪತ್ರಿಕೆಯಾದ ಪ್ರಥಮ ಭಾಷೆ ಪರೀಕ್ಷೆ ಜಿಲ್ಲೆಯ 89 ಕೇಂದ್ರಗಳಲ್ಲಿ ಸುಗಮವಾಗಿ ನಡೆಯಿತು.ಪರೀಕ್ಷೆಯ ಮೊದಲ ದಿನ ಶುಕ್ರವಾರ ಪ್ರಥಮ ಭಾಷೆ (ಕನ್ನಡ, ಸಂಸ್ಕೃತ,ಉರ್ದು ಹಾಗೂ ಆಂಗ್ಲ) ಭಾಷಾ ಪರೀಕ್ಷೆಗಳುನಡೆದವು. ಜಿಲ್ಲೆಯಲ್ಲಿ ಪರೀಕ್ಷೆಗೆ ನೋಂದಣಿ ಮಾಡಿಸಿದ್ದ 20791 ಮಕ್ಕಳ ಪೈಕಿ 155ಮಕ್ಕಳು ಗೈರಾದರೆ, 20636 ಮಕ್ಕಳು ಪರೀಕ್ಷೆ ಬರೆದಿದ್ದಾರೆ.

ಜಿಲ್ಲೆಯ 463 ಪ್ರೌಢಶಾಲೆಗಳ 21,637 ಮಕ್ಕಳು ಪರೀಕ್ಷೆಗೆ ನೋ೦ದಣಿ ಮಾಡಿಸಿದ್ದು, ಈಪೈಕಿ10,736 ಬಾಲಕರು, 10,901 ಬಾಲಕಿಯರು ಪರೀಕ್ಷೆ ಬರೆಯುತ್ತಿದ್ದಾರೆ. ವಾರ್ಷಿಕ ಪರೀಕ್ಷೆ ಹಿನ್ನೆಲೆಯಲ್ಲಿ ನಗರದ ಮೋತಿ ವೀರಪ್ಪ ಸರ್ಕಾರಿ ಪಿಯು ಕಾಲೇಜು, ರಾಜನಹಳ್ಳಿ ಸೀತಮ್ಮ ಬಾಲಕಿಯರ ಪಿಯು ಕಾಲೇಜಿನ ಪರೀಕ್ಷಾ ಕೇಂದ್ರಗಳಿಗೆ ಜಿಲ್ಲಾಧಿಕಾರಿ ಶಿವಾನಂದ ಕಾಪಶಿ ಭೇಟಿ ನೀಡಿ, ಪರಿಶೀಲಿಸಿದರು. ದಾವಣಗೆರೆ ಉತ್ತರ ವಲಯ, ಚನ್ನಗಿರಿ ತಾಲೂಕಿನಲ್ಲಿ ತಲಾ 17 ಕೇಂದ್ರ, ದಾವಣಗೆರೆ ದಕ್ಷಿಣ ವಲಯದಲ್ಲಿ22, ಹರಿಹರ 13, ಹೊನ್ನಾಳಿ 11 ಹಾಗೂ ಜಗಳೂರಿನ 12 ಪರೀಕ್ಷಾ ಕೇಂದ್ರಗಳಲ್ಲಿ ಎಸ್ಸೆಸ್ಸೆಲ್ಸಿ ಪರೀಕ್ಷೆ ಆರಂಭವಾಯಿತು.

ಮಾ.31ರಿಂದ ಏ.15ರವರೆಗೆ ನಡೆಯುವ ಎಸೆಸ್ಸೆಲ್ಸಿ ಪರೀಕ್ಷೆಗಳ ಹಿನ್ನೆಲೆಯಲ್ಲಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರು ವ್ಯಾಪ್ತಿಯಲ್ಲಿ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾಧಿಕಾರಿಗಳು ಆದೇಶ ಹೊರಡಿಸಿದ್ದಾರೆ. ದಾವಣಗೆರೆ ವಿವಿಧಪರೀಕ್ಷಾ ಕೇಂದ್ರಕ್ಕೆ ಭೇಟಿನೀಡಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿ ಪರೀಕ್ಷಾ ದಿನಗಳಂದು ಪರೀಕ್ಷಾ ಕೇಂದ್ರಗಳಸುತ್ತಲಿನ 200 ಮೀ. ಪರಿಧಿ ವ್ಯಾಪ್ತಿಯ ಪ್ರದೇಶವನ್ನು ಸಾರ್ವಜನಿಕ ಪ್ರವೇಶಕ್ಕೆ ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಲಿನ ಜೆರಾಕ್ಸ್ಅಂಗಡಿಗಳು, ಸೈಬರ್ ಕೆಫೆ ಮತ್ತು ಕಂಪ್ಯೂಟರ್ ಅ೦ಗಡಿಗಳನ್ನು ಪರೀಕ್ಷಾ ಅವಧಿಯಲ್ಲಿ ಕಡ್ಡಾಯವಾಗಿ ಮುಚ್ಚಲು ಆದೇಶಿಸಲಾಗಿದೆ ಎಂದು
ತಿಳಿಸಿದರು.

ಪರೀಕ್ಷಾರ್ಥಿ ಮಕ್ಕಳು, ಪರೀಕ್ಷೆ ಬರೆಯಲು
ಮಕ್ಕಳನ್ನು ಬಿಡಲು ಪರೀಕ್ಷಾ ಕೇಂದ್ರಗಳಿಗೆ ಬಿಡಲುಬರುವ ಪಾಲಕರು ಯಾವುದೇ ಕಾರಣಕ್ಕೂ ಪರೀಕ್ಷಾ ಕೇಂದ್ರಗಳ ಬಳಿ ಗುಂಪು ಗೂಡುವುದು, ನಿಲ್ಲುವುದು, ವಾಹನ ನಿಲುಗಡೆಮಾಡುವುದನ್ನು ಸಂಪೂರ್ಣವಾಗಿ ನಿಷೇಧಿಸಲಾಗಿದೆ ಎಂದು ಹೇಳಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *