ದಾವಣಗೆರೆ: ಭೀಕರ ದುರಂತ; ಕೆರೆಯಲ್ಲಿ ಈಜಲು ಹೋಗಿದ್ದ ಇಬ್ಬರು ಕುರಿಗಾಹಿ ಯುವಕರು ಸಾವು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಜಿಲ್ಲೆಯ ಜಗಳೂರು ತಾಲ್ಲೂಕಿನ ಹಿರೇ ಮಲ್ಲನಹೊಳೆ ಗ್ರಾ.ಪಂ. ವ್ಯಾಪ್ತಿಯ ಚಿಕ್ಕಮಲ್ಲನಹೊಳೆ  ಕೆರೆಯಲ್ಲಿ ಬಿಸಿಲಿನ ತಾಪ ತಾಳಲಾರದೇ ಈಜಲು ಹೋಗಿದ್ದ ಕುರಿಗಾಹಿ ಯುವಕರಿಬ್ಬರು ಕೆರೆಯಲ್ಲಿ ಮುಳುಗಿ ಸಾವನ್ನಪ್ಪಿದ ಘಟನೆ ನಡೆದಿದೆ.

ಚಿಕ್ಕಮಲ್ಲನಹೊಳೆ ಗ್ರಾಮದ ವೀರಣ್ಣ ಪುತ್ರ ವಿಜಯ್ (25) , ವಿಜಯನಗರ ಜಿಲ್ಲೆ ಆಲೂರು ಗ್ರಾಮದ ಲಿಂಗಣ್ಣ ಪುತ್ರ ರಾಜು (19) ಸಾವನ್ಬಪ್ಪಿದ ಯುವಕರಾಗಿದ್ದಾರೆ. ಈ ಯುವರಿಬ್ಬರು ಅಕ್ಕ- ತಂಗಿ ಮಕ್ಕಳಾಗಿದ್ದಾರೆ. ಬೇಸಿಗೆ ರಜೆ ಹಿನ್ನೆಲೆ ಕುರಿ ಮೇಯಿಸಲು ಹೋಗಿದ್ದರು. ಈ ವೇಳೆ ಬೇಸಿಗೆ ಶಕೆ ತಾಳಲಾರದೇ ಈಜಲು ಹೋಗಿದ್ದರು.

ರಾಜು ಆಳವಾದ ಗುಂಡಿಯಲ್ಲಿ ಮುಳುಗಿದ್ದಾನೆ. ಆತನನ್ನು ರಕ್ಷಿಸಲು ಹೋದ ವಿಜಯ್ ಕೂಡ ಗುಂಡಿಯಲ್ಲಿ ಮುಳುಗಿದ್ದಾನೆ. ಆಗ ಇನ್ನೊಬ್ಬ ಯುವಕ ರಕ್ಷಿಸಲು ಹೋದರೂ ಸಾಧ್ಯವಾಗದಿದ್ದಾಗ ಕೆರೆಯಿಂದ ಹೊರ ಬಂದು ಜನರನ್ನು ಕರೆದುಕೊಂಡು ಹೋಗಿದ್ದಾನೆ. ಆದರೆ, ಅಷ್ಟರಲ್ಲಿ ಯುವಕರಿಬ್ಬರು ಸಾವನ್ನಪ್ಪಿದ್ದರು. ಸ್ಥಳೀಯರು ಯುವಕರ ಮೃತ ದೇಹ ಹೊರ ತೆಗೆದಿದ್ದಾರೆ. ಯುವಕರನ್ನು ಕಳೆದುಕೊಂಡ ಕುಟುಂಬಸ್ಥರು ಕಣ್ಣೀರು ಹಾಕಿದ್ದಾರೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *