ದಾವಣಗೆರೆ: ಕಾಂಗ್ರೆಸ್ ನಲ್ಲಿ ಸಿಎಂ ಅಭ್ಯರ್ಥಿ ವಿಚಾರವಾಗಿ ಮಾಜಿ ಸಿಎಂ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ನಡುವೆ ಮುಸುಕಿನ ಗುದ್ದಾಟ ನಡೆಯುತ್ತಿದೆ. ಇದೀಗ ಮಲ್ಲಿಕಾರ್ಜುನ ಖರ್ಗೆ ಸಿಎಂ ಆಗೋ ವಿಚಾರ ಚರ್ಚೆಗೆ ಬಂದಿದ್ದು, ಇದಕ್ಕೆ ಕಾಂಗ್ರೆಸ್ ಹಿರಿಯ ಶಾಸಕ ಶಾಮನೂರು ಶಂಕರಪ್ಪ ಪ್ರತಿಕ್ರಿಯಿಸಿದ್ದು, ಖರ್ಗೆ ನಮ್ಮ ಸ್ನೇಹಿತ, ಅವರು ಸಿಎಂ ಆದ್ರೆ ಒಳ್ಳೆದು ಎಂದು ಹೇಳಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿ, ಇನ್ನು ದಾವಣಗೆರೆ ಉತ್ತರ, ದಕ್ಷಿಣಕ್ಕೆ ಬಿಜೆಪಿಯಿಂದ ಯಾರೇ ಅಭ್ಯರ್ಥಿ ಹಾಕಿದ್ರೂ ಎದುರಿಸಲು ಸಿದ್ಧವಿದ್ದೇವೆ. ಸಿಎಂ ಬಸವರಾಜ ಬೊಮ್ಮಾಯಿ ದಾವಣಗೆರೆ ಉತ್ತರದಿಂದ ಸ್ಪರ್ಧೆ ಮಾಡಲ್ಲ. ಈ ಬಗ್ಗೆ ನನ್ನ ಜತೆ ಯಾವುದೇ ಚರ್ಚೆ ನಡೆದಿಲ್ಲ ಎಂದರು.
ಜಗದೀಶ್ ಶೆಟ್ಟರ್ ಗೆ ಬಿಜೆಪಿ ಟಿಕೆಟ್ ಸಿಗದಿದ್ದಕ್ಕೆ ಬೇಸರ ಆಗಿದ್ದಾರೆ. ಆದ್ರೆ, ಅವರನ್ನು ನಾವು ಕಾಂಗ್ರೆಸ್ ಪಕ್ಷಕ್ಕೆ ಕರೆದಿಲ್ಲ. ನಾವು ಕರೆದರೂ ಅವರು ಬರಲ್ಲ. ಅವರಿಗೆ ಟಿಕೆಟ್ ಸಿಕ್ಕೇ ಸಿಗುತ್ತೆ. ಸಿಗದಿದ್ದರೂ ಸ್ವತಂತ್ರವಾಗಿ ಸ್ಪರ್ಧೆ ಮಾಡ್ತಾರೆ ಎಂದರು.



