ನವದೆಹಲಿ; ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರರ್ ಕ್ಷೇತ್ರ ಘೋಷಣೆಯಾಗಿಲ್ಲ. ದಾವಣಗೆರೆ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್, ದಾವಣಗೆರೆ ದಕ್ಷಿಣ-ಅಜಯ್ ಕುಮಾರ್, ಮಾಯಕೊಂಡ-ಬಸವರಾಜ್ ನಾಯ್ಕ್, ಚನ್ನಗಿರಿ-ಶಿವಕುಮಾರ್ ಆಯ್ಕೆ ಮಾಡಲಾಗುದೆ.
ಈಗಾಗಲೇ ಹೊನ್ನಾಳಿ ರೇಣುಕಾಚಾರ್ಯ, ಹರಿಹರ ಬಿ.ಪಿ. ಹರೀಶ್, ಜಗಳೂರು ಎಸ್.ವಿ ರಾಮಚಂದ್ರಗೆ ಟಿಕೆಟ್ ನೀಡಲಾಗುತ್ತು. ಎರಡನೇ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.
ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೂ 12 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.
- 23 ಮಂದಿ ಅಭ್ಯರ್ಥಿಗಳ ವಿವರ
- ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್
- ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ
- ಇಂಡಿ-ಕಾಸಗೌಡ ಬಿರಾದಾರ್
- ಗುರುಮಿಠ್ಕಲ್-ಲಲಿತಾ ಅಣ್ಣಾಪುರ್
- ಬೀದರ್-ಈಶ್ವರ್ ಸಿಂಗ್ ಠಾಕೂರ್
- ಭಾಲ್ಕಿ-ಪ್ರಕಾಶ್ ಖಂಡ್ರೆ
- ಗಂಗಾವತಿ-ಪರಣ್ಣ ಮುನವಳ್ಳಿ
- ಕಲಘಟಗಿ-ನಾಗರಾಜ್ ಛಬ್ಬಿ
- ಹಾನಗಲ್-ಶಿವರಾಜ್ ಸಜ್ಜನರ್
- ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್
- ಹರಪನಹಳ್ಳಿ-ಕರುಣಾಕರ ರೆಡ್ಡಿ
- ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್
- ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
- ಮಾಯಕೊಂಡ-ಬಸವರಾಜ್ ನಾಯ್ಕ್
- ಚನ್ನಗಿರಿ-ಶಿವಕುಮಾರ್
- ಬೈಂದೂರು-ಗುರುರಾಜ್ ಗಂತಿಹೊಳೆ
- ಮೂಡಿಗೆರೆ-ದೀಪಕ್ ದೊಡ್ಡಯ್ಯ
- ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್
- ಶಿಡ್ಲಘಟ್ಟ-ರಾಮಚಂದ್ರ ಗೌಡ
- ಕೆಜಿಎಫ್-ಅಶ್ವಿನಿ ಸಂಪಂಗಿ
- ಶ್ರವಣಬೆಳಗೊಳ-ಚಿದಾನಂದ
- ಅರಸೀಕೆರೆ-ಜಿ.ವಿ.ಬಸವರಾಜು
- ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.



