Connect with us

Dvgsuddi Kannada | online news portal | Kannada news online

ರಾಜ್ಯದ ಜನ ಭೀಕರ ಪ್ರವಾಹದಲ್ಲಿ ಸಿಲುಕಿದ್ದರೂ ಪ್ರಧಾನಿ ಕಿವಿಗೊಡಲಿಲ್ಲ : ಸಿದ್ದರಾಮಯ್ಯ

ಪ್ರಮುಖ ಸುದ್ದಿ

ರಾಜ್ಯದ ಜನ ಭೀಕರ ಪ್ರವಾಹದಲ್ಲಿ ಸಿಲುಕಿದ್ದರೂ ಪ್ರಧಾನಿ ಕಿವಿಗೊಡಲಿಲ್ಲ : ಸಿದ್ದರಾಮಯ್ಯ

ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಎಂದೂ ಕಂಡು ಕೇಳರಿಯದಂತಹ ಆಗಸ್ಟ್‌ ತಿಂಗಳಲ್ಲಿ ಬಂದಿತ್ತು. ರಾಜ್ಯದ ಜನ ಸಾಕಷ್ಟು  ಕಷ್ಟನಷ್ಟಗಳನ್ನು ಅನುಭವಿಸಿದರೂ ಪ್ರಧಾನಿ ನರೇಂದ್ರ ಮೋದಿ ಅವರು  ಸಮಸ್ಯೆಗೆ ಕಿವಿಗೊಡಲಿಲ್ಲ ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟೀಕಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರು  ಬಹಳ ದಿನಗಳ ನಂತರ ಕರ್ನಾಟಕಕ್ಕೆ ಬಂದಿದ್ದಾರೆ.  ಅವರ ಕರ್ನಾಟಕ್ಕೆ ಬರುವುದಕ್ಕೆ  ವಿರೋಧ ಪಕ್ಷವಾಗಿ ಅವರನ್ನು ಸ್ವಾಗತಿಸುತ್ತೇವೆ. ಪ್ರಧಾನಿ ಹುದ್ದೆ ಯಾವ ಪಕ್ಷಕ್ಕೂ ಸೇರಿದ್ದಲ್ಲ ಅವರು 130 ಕೋಟಿ ಜನರ ಪ್ರಧಾನ ಮಂತ್ರಿಗಳು. ರಾಜ್ಯದಲ್ಲಿ ಪ್ರವಾಹ ಬಂದಾಗ ನರೇಂದ್ರ ಮೋದಿ ಬರಲಿಲ್ಲ, ಕನಿಷ್ಠ  ಟ್ವೀಟ್ ಮೂಲಕವೂ ಸಾಂತ್ವನ ಹೇಳಲಿಲ್ಲ ಎಂದರು.

ಪ್ರವಾಹ ಪರಿಹಾರ ಕೊಡಿ ಎಂದು ಮುಖ್ಯಮಂತ್ರಿ ಯಡಿಯೂರಪ್ಪ ಮನವಿ: ಪರಿಹಾರ ವಿಷಯವನ್ನೇ  ಪ್ರಸ್ತಾಪಿಸದ  ಪ್ರಧಾನಿ ನರೇಂದ್ರ ಮೋದಿ…!

ಸಣ್ಣ ಸಣ್ಣ ವಿಚಾರಗಳಿಗೆ ಟ್ವೀಟ್ ಮಾಡುವ ಪ್ರಧಾನಿಗಳು,  ಸಂತ್ರಸ್ತರಿಗೆ ಟ್ವೀಟ್ ಮೂಲಕವೂ ಸಾಂತ್ವನ ಹೇಳಲಿಲ್ಲ.  22 ಜಿಲ್ಲೆ 103 ತಾಲ್ಲೂಕುಗಳಲ್ಲಿ ಪ್ರವಾಹ ಬಂದಿತ್ತು. ಅದರೆ, ಅವರು ಜನರ ಕಷ್ಟ ಆಲಿಸುವುದು ಇರಲಿ. 2009ರಲ್ಲಿ ಪ್ರವಾಹ ಬಂದಾಗ ನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ರಾಜ್ಯದಲ್ಲಿ  ಯಡಿಯೂರಪ್ಪ ಮುಖ್ಯಮಂತ್ರಿಯಾಗಿದ್ದರು. ವೈಮಾನಿಕ ಸಮೀಕ್ಷೆ ನಡೆಸಿ, ಸ್ಥಳದಲ್ಲಿಯೇ 1,500 ಕೋಟಿ ಮಧ್ಯಂತರ ಪರಿಹಾರ ಘೋಷಿಸಿ, ಪರಿಹಾರ ನೀಡಿದ್ದರು ಎಂದರು.

ಈ ಬಾರಿಯ ಪ್ರವಾಹದಿಂದ 1 ಲಕ್ಷ ಕೋಟಿ ನಷ್ಟ ಉಂಟಾಗಿದೆ. ಮುಖ್ಯಮಂತ್ರಿ ಯಡಿಯೂರಪ್ಪ 50 ಸಾವಿರ ಕೋಟಿ ಅಂತಾ ಹೇಳಿದ್ರು. ಕೊನೆಗೆ ಕೇಂದ್ರಕ್ಕೆ ವರದಿ ಸಲ್ಲಿಸುವಾಗ 30 ಸಾವಿರ ಕೋಟಿ ಅಂತಾ ವರದಿ ಕೊಟ್ರು. ಆದರೆ, ಕೇಂದ್ರ ಕೊಟ್ಟಿದ್ದು ಕೇವಲ 3 ಸಾವಿರ ಕೋಟಿ ಮಾತ್ರ  ಎಂದು ಟೀಕಿಸಿದರು.

ರಾಜ್ಯದಿಂದ 25 ಸಂಸದರನ್ನು ಗೆಲ್ಲಿಸಿ ಕಳುಹಿಸಲಾಗಿದೆ.  ಅವರು ಪ್ರಧಾನಿ ಮನೆಯಲ್ಲಿ ಕುಳಿತುಕೊಳ್ಳಬೇಕಿತ್ತು. ಇದೊಂದು ರಾಷ್ಟ್ರೀಯ ವಿಪತ್ತು ಅಂತ ಘೋಷಿಸಿ ಅನ್ನಬೇಕಿತ್ತು. ಆದರೆ ನಿನ್ನೆ ಯಡಿಯೂರಪ್ಪ ಬಹಳ ಗೋಗರೆದು ಕೇಳಿಕೊಂಡ್ರೂ, ಪ್ರಧಾನಿ ಉತ್ತರಿಸಲಿಲ್ಲ.ಕರ್ನಾಟಕದ ಬಗ್ಗೆ ಮೋದಿಗೆ ಇರುವ ಅಸಡ್ಡೆ ಮತ್ತು ನಿರ್ಲಕ್ಷ್ಯ ಇದರಿಂದ ಗೊತ್ತಾಗುತ್ತದೆ. ರಾಜ್ಯದ ಜನರು ಮೋದಿಗೆ ವೋಟ್ ಹಾಕಿ ದೊಡ್ಡ ದ್ರೋಹ ಮಾಡಿದ್ದಾರೆ ಎಂದು ಟೀಕಿಸಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top