ಮೇ 22 ರಿಂದ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ; ಮೇ 20, 21ರಂದು ಸಿಇಟಿ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಬೆಂಗಳೂರು: ಪ್ರಸಕ್ತ ಸಾಲಿನ ದ್ವಿತೀಯ ಪಿಯುಸಿ ಪೂರಕ ಪರೀಕ್ಷೆ ಮೇ 22 ರಿಂದ ಜೂನ್ 2 ರವರೆಗೆ ನಡೆಯಲಿವೆ ಎಂದು ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ಸುತ್ತೋಲೆ ಹೊರಡಿಸಿದೆ.

  • ಪರೀಕ್ಷೆ ದಿನಾಂಕ
  • ಮೇ 22 ರಂದು ಕನ್ನಡ
  • ಮೇ 23 ಐಚ್ಛಿಕ ಕನ್ನಡ, ರಸಾಯನಶಾಸ್ತ್ರ, ಮೂಲ ಗಣಿತ
  • ಮೇ 24 ರಂದು ಇಂಗ್ಲಿಷ್
  • ಮೇ 25 ರಂದು ಸಮಾಜ ಶಾಸ್ತ್ರ, ವಿದ್ಯುನ್ಮಾನ ಶಾಸ್ತ್ರ ಮತ್ತು ಗಣಿತ ವಿಜ್ಞಾನ
  • ಮೇ 26 ರಂದು ಇತಿಹಾಸ ಮತ್ತು ಸಂಖ್ಯಾಶಾಸ್ತ್ರದ
  • ಮೇ27 ರಂದು ಹಿಂದಿ
  • ಮೇ. 29 ರಂದು ಭೂಗೋಳ ಶಾಸ್ತ್ರ, ಮನಃಶಾಸ್ತ್ರ, ಭೌತಶಾಸ್ತ್ರ ವಿಷಯದ ಪರೀಕ್ಷೆ ನಡೆಯಲಿದ್ದು
  • ಮೇ 30 ರಂದು ಲೆಕ್ಕಶಾಸ್ತ್ರ, ಭೂಗರ್ಭ ಶಾಸ್ತ್ರ, ಶಿಕ್ಷಣ ಶಾಸ್ತ್ರ, ಗೃಹ ವಿಜ್ಞಾನ
  • ಮೇ 31 ರಂದು ರಾಜ್ಯ ಶಾಸ್ತ್ರ ಮತ್ತು ಗಣಿತ ಶಾಸ್ತ್ರ
  • ಜೂನ್ 1 ರಂದು ತರ್ಕಶಾಸ್ತ್ರ, ಹಿಂದೂಸ್ತಾನಿ ಸಂಗೀತ, ವ್ಯವಹಾರ ಅಧ್ಯಯನ
  • ಜೂನ್ 2 ರಂದು ಅರ್ಥ ಶಾಸ್ತ್ರ ಮತ್ತು ಜೀವಶಾಸ್ತ್ರ

ಪ್ರತಿ ದಿನ ಬೆಳಗ್ಗೆ 10.15 ರಿಂದ ಮಧ್ಯಾಹ್ನ 1.30 ರವರೆಗೆ ಪರೀಕ್ಷೆ ನಡೆಯಲಿದ್ದು, ಮುಖ್ಯ ಪರೀಕ್ಷೆಯಲ್ಲಿ ಅನುತ್ತೀರ್ಣರಾದ ವಿದ್ಯಾರ್ಥಿಗಳು ಮರು ಪರೀಕ್ಷೆ ಬರೆಯುವಂತೆ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಳಿ ತಿಳಿಸಿದೆ.

ಮೇ 20 ಹಾಗೂ 21ರಂದು ವಿವಿಧ ವೃತ್ತಿಪರ ಕೋರ್ಸ್​ಗಳಿಗೆ ಸಾಮಾನ್ಯ ಪ್ರವೇಶ ಪರೀಕ್ಷೆನಡೆಯಲಿದ್ದು, ಪಿಯುಸಿ ಪೂರಕ ಪರೀಕ್ಷೆ ಬರೆಯಲು ಉದ್ದೇಶಿಸಿರುವವರು ಕೂಡ ಸಿಇಟಿ ಪರೀಕ್ಷೆ ಬರೆಯಬಹುದು ಎಂದು (ಏಪ್ರಿಲ್ 27-2023) ಕರ್ನಾಟಕ ಪರೀಕ್ಷಾ ಪ್ರಾಧಿಕಾರ ಈ ಮೊದಲು ತಿಳಿಸಿತ್ತು.

ಮೇ 20 ಮತ್ತು 21 ರಂದು ಸಿಇಟಿ ಪರೀಕ್ಷೆಗಳು ನಡೆಯಲಿವೆ. ಸಿಇಟಿ ಅಂಗವಾಗಿ ಹೊರನಾಡು ಮತ್ತು ಗಡಿನಾಡು ವಿದ್ಯಾರ್ಥಿಗಳಿಗೆ ನಡೆಸುವ ಕಡ್ಡಾಯ ಕನ್ನಡ ಪರೀಕ್ಷೆಗಳನ್ನು ಮೇ 22 ರಂದು ನಡೆಸಲು ತೀರ್ಮಾನಿಸಲಾಗಿದೆ ಎಂದು ಸಿಇಟಿ ಪರೀಕ್ಷೆ ಬಗ್ಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕಿ ರಮ್ಯಾ ಮಾಹಿತಿ ನೀಡಿದ್ದರು.

ನಿರೀಕ್ಷೆಗಿಂತ ಕಡಿಮೆ ಅಂಕ ಬಂದಿದೆ ಎಂದು ಕೆಲವರು ಪೂರಕ ಪರೀಕ್ಷೆ ಬರೆಯಲು ನಿರ್ಧರಿಸಿದ್ದಾರೆ. ಅಂಥವರೂ ಸಿಇಟಿ ಪರೀಕ್ಷೆ ಬರೆಯಬಹುದು, ಪೂರಕ ಪರೀಕ್ಷೆ ಬರೆಯುವವರು ಸಿಇಟಿಗೆ ಹಾಜರಾದರೆ ಮಾತ್ರ ಅವರ ಪೂರಕ ಪಿಯು ಪರೀಕ್ಷೆ ಫಲಿತಾಂಶದ ಅಂಕಗಳನ್ನು ಪರಿಗಣನೆಗೆ ತೆಗೆದುಕೊಳ್ಳಲಾಗುತ್ತದೆ ಎಂದು ತಿಳಿಸಿದ್ದರು.

ವೃತ್ತಿಪರ ಕೋರ್ಸ್​ಗಳಿಗೆ ಪರೀಕ್ಷೆ: ಇಂಜಿನಿಯರಿಂಗ್/ವಾಸ್ತುಶಿಲ್ಪ ಕೋರ್ಸುಗಳು, ಫಾರ್ಮ್ ಸೈನ್ಸ್ ಅಂದ್ರೆ ಬಿಎಸ್ಸಿ (ಕೃಷಿ), ಬಿ.ಎಸ್.ಸಿ (ರೇಷ್ಮೆ ಕೃಷಿ), ಬಿಎಸ್ಸಿ (ತೋಟಗಾರಿಕೆ), ಬಿಎಸ್ಸಿ (ಅರಣ್ಯ) ಬಿ.ಎಸ್.ಬಿ.ಎಸ್.ಕೆ(ಆಹಾರ ಮತ್ತು ವಿಜ್ಞಾನ), ಬಿಟೆಕ್ (ಡೈರಿ ಟೆಕ್), ಬಿಎಫ್‌ಎಸ್ಸಿ(ಫಿಶರೀಸ್), ಬಿ.ಟೆಕ್ (ಫುಡ್ ಸೈನ್ಸ್ & ಟೆಕ್) ಸೇರಿದಂತೆ ವಿವಿಧ ಕೋರ್ಸ್​ಗಳ ಪ್ರವೇಶಕ್ಕಾಗಿ ಪರೀಕ್ಷೆ ನಡೆಸಲಾಗುತ್ತದೆ.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *