ದಾವಣಗೆರೆ; ಖಾಸಗಿ ಬಸ್ -ಕಾರು ನಡುವೆ ಭೀಕರ ಅಪಘಾತ; ಲೆಕ್ಕ ಪರಿಶೋಧಕ ಸಾವು; ಮೂವರಿಗೆ ಗಂಭೀರ ಗಾಯ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ; ಖಾಸಗಿ ಬಸ್ -ಕಾರಿನ ‌ನಡುವೆ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ದಾವಣಗೆರೆಯ ಹಿರಿಯ ಲೆಕ್ಕ ಪರಿಶೋಧಕ ಹಾಗೂ ವಕೀಲರೂ ಆದ ವಿ.ಎಸ್. ಅರುಣಾಚಲ ಶೆಟ್ಟಿ (72) ಅವರು ಸಾವನ್ನಪ್ಪಿದ್ದಾರೆ. ತೀವ್ರವಾಗಿ ಗಾಯಗೊಂಡ ಮೂವರ ಸ್ಥಿತಿ ಗಂಭೀರವಾಗಿದೆ.

ಜಗಳೂರು ತಾಲ್ಲೂಕಿನ ಬಿಳಿಚೋಡು ಹೋಬಳಿಯ ನರೇನಹಳ್ಳಿ ಬಳಿ ಈ ಘಟನೆ ನಡೆದಿದೆ. ಅರುಣಾಚಲಶೆಟ್ಟಿ ಅವರು ತಮ್ಮ ಕುಟುಂಬದೊಂದಿಗೆ ಉಜ್ಜಯಿನಿಯ ದೇವಸ್ಥಾನಕ್ಕೆ ತೆರಳಿ, ಪೂಜೆ ಸಲ್ಲಿಸಿ ವಾಪಸ್ ಬರುವಾಗ ಖಾಸಗಿ ಬಸ್ ಮತ್ತು ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಈ ದುರಂತ ನಡೆದಿದೆ.

ಗಾಯಗೊಂಡಿರುವ ಮೂವರನ್ನು ದಾವಣಗೆರೆ ಮತ್ತು ಜಗಳೂರು ಪಟ್ಟಣದ ಆಸ್ಪತ್ರೆಗಳಿಗೆ ಹೆಚ್ಚಿನ ಚಿಕಿತ್ಸೆಗೆ ದಾಖಲಿಸಲಾಗಿದೆ. ಬಸ್‌ನಲ್ಲಿದ್ದ ಒಬ್ಬ ಪ್ರಯಾಣಿಕನಿಗೂ ಗಾಯವಾಗಿದೆ. ಬಿಳಿಚೋಡು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *