Connect with us

Dvgsuddi Kannada | online news portal | Kannada news online

ಚಿತ್ರದುರ್ಗ; ಕಾಂಗ್ರೆಸ್ ನ ಮಾಜಿ ಶಾಸಕ ಎಸ್. ಕೆ. ಬಸವರಾಜನ್,‌ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಿಜೆಪಿ ಸೇರ್ಪಡೆ

ಪ್ರಮುಖ ಸುದ್ದಿ

ಚಿತ್ರದುರ್ಗ; ಕಾಂಗ್ರೆಸ್ ನ ಮಾಜಿ ಶಾಸಕ ಎಸ್. ಕೆ. ಬಸವರಾಜನ್,‌ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಿಜೆಪಿ ಸೇರ್ಪಡೆ

ಚಿತ್ರದುರ್ಗ; ರಾಜ್ಯ ಚುನಾವಣೆ ಕಣ ರಂಗೇರುತ್ತಿದ್ದು, ಚುನಾವಣೆಗೆ ಕೇವಲ 6 ದಿನ ಬಾಕಿ ಇರುವಾಗ ಕಾಂಗ್ರೆಸ್ ನ ಮಾಜಿ ಶಾಸಕ ಎಸ್. ಕೆ. ಬಸವರಾಜನ್,‌ ಅವರ ಪತ್ನಿ ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ.

ಕಮ್ಮರೆಡ್ಡಿ ಸಮುದಾಯ ಭನದ‌ಲ್ಲಿ ಚಿತ್ರದುರ್ಗ ಬಿಜೆಪಿ ಅಭ್ಯರ್ಥಿ ತಿಪ್ಪಾರೆಡ್ಡಿ ಪರ ಪ್ರಚಾರ ಸಭೆ ನಡೆಯುತ್ತಿರುವ ಸಂದರ್ಭದಲ್ಲಿ ಜಿಜೆಪಿ ರಾಜ್ಯ ಉಪಾಧ್ಯಕ್ಷ ವಿಜಯೇಂದ್ರ ನೇತೃತ್ವದಲ್ಲಿ ಎಸ್. ಕೆ. ಬಸವರಾಜನ್,‌ ಚಿತ್ರದುರ್ಗ ಪಕ್ಷೇತರ ಅಭ್ಯರ್ಥಿ ಸೌಭಾಗ್ಯ ಬಸವರಾಜನ್ ಬಿಜೆಪಿ ಸೇರ್ಪಡೆಯಾಗಿದ್ದಾರೆ. ಕಾಂಗ್ರೆಸ್ ಪಕ್ಷದಿಂದ ಈ ಬಾರಿ ಚಿತ್ರದುರ್ಗದಿಂದ ಟಿಕೆಟ್ ಕೈ ತಪ್ಪಿದ ಹಿನ್ನೆಲೆ ಮಾಜಿ ಶಾಸಕ ಬಸವರಾಜನ್ ತಮ್ಮ ಪತ್ನಿಯನ್ನು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕೆ ಇಳಿಸಿದ್ದರು. ಇದೀಗ ಒಂದು ವಾರ ಚುನಾವಣೆ ಬಾಕಿ ಇರುವಾಗ ಪಕ್ಷೇತ್ರ ಅಭ್ಯರ್ಥಿ  ಸೌಭಾಗ್ಯ ಚುನಾವಣಾ ಕಣದಿಂದ ಹಿಂದೆ ಸರಿದು, ಬಿಜೆಪಿಗೆ ಬೆಂಬಲ ಸೂಚಿಸಿದ್ದಾರೆ. ಇದರ ಜೊತೆಗೆ ಬಿಜೆಪಿ ಸೇರಿದ್ದಾರೆ.‌ ಈ ಬೆಳವಣಿಗೆಯಿಂದ ಚಿತ್ರದುರ್ಗ ಬಿಜೆಪಿಗೆ ಚುನಾವಣೆ ಹೊತ್ತಿನಲ್ಲಿ ಮತ್ತಷ್ಟು ಬಲ ಬಂದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top