Connect with us

Dvgsuddi Kannada | online news portal | Kannada news online

ದಾವಣಗೆರೆ; ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರಾಗಿ ವೀರೇಶ್ ಎಸ್ . ಒಡೇನಪುರ ಆಯ್ಕೆ

IMG 20230507 063558

ದಾವಣಗೆರೆ

ದಾವಣಗೆರೆ; ರಾಜ್ಯ ಸರ್ಕಾರಿ ನೌಕರ ಸಂಘದ ಜಿಲ್ಲಾಧ್ಯಕ್ಷರಾಗಿ ವೀರೇಶ್ ಎಸ್ . ಒಡೇನಪುರ ಆಯ್ಕೆ

ದಾವಣಗೆರೆ: ರಾಜ್ಯ ಸರ್ಕಾರಿ ನೌಕರರ ಸಂಘ ಜಿಲ್ಲಾ ನೂತನ ಅಧ್ಯಕ್ಷರಾಗಿ ಪಿ.ಡಬ್ಲ್ಯೂ.ಡಿ ಇಲಾಖೆ ಕಚೇರಿಯ ಆದೀಕ್ಷಕ ವೀರೇಶ್ ಎಸ್ . ಒಡೇನಪುರ ಆಯ್ಕೆಯಾಗುದ್ದಾರೆ. ಇವರಿಗೆ ನಿಕಟಪೂರ್ವ ಅಧ್ಯಕ್ಷ ಬಿ. ಪಾಲಾಕ್ಷ ಹೂಗುಚ್ಚ ನೀಡಿ ಸ್ವಾಗತಿಸಿದರು.

ಸಂಘದ ಕಚೇರಿಯಲ್ಲಿ ಎಲ್ಲಾ ಪದಾಧಿಕಾರಿಗಳ ಸಮ್ಮುಖದಲ್ಲಿ ಆಯ್ಕೆ ಮಾಡಲಾಗಿದೆ. ಅಧಿಕಾರ ಸ್ವೀಕರಿಸಿದ ನಂತರ ಮಾತನಾಡಿದ ವೀರೇಶ್ ಎಸ್ . ಒಡೇನಪುರ, ಈ ಹಿಂದೆ ಅಧ್ಯಕ್ಷರಿಗೆ ನೀಡಿದ ಎಲ್ಲಾ ಸಹಕಾರವನ್ನು ನಮಗೆ ನೀಡುವಂತೆ ವಿನಂತಿಸಿಕೊಂಡರು. ಕಾರ್ಯಕ್ರಮದಲ್ಲಿ ಜಿಲ್ಲಾ ಕಾರ್ಯ ಅಧ್ಯಕ್ಷ ಗುರುಮೂರ್ತಿ. ಸಿ. ಜಿಲ್ಲಾ ಖಜಾಂಚಿಬಿ .ಆರ್. ತಿಪ್ಪೇಸ್ವಾಮಿ, ಪ್ರಭಾರಿ ರಾಜ್ಯ ಪರಿಷತ್ ಸದಸ್ಯ ಲೋಕಣ್ಣ ಮಾಗೋಡ್ರು, ಗೌರವ ಅಧ್ಯಕ್ಷ ಡಾಕ್ಟರ್ ಉಮೇಶ್ .ಬಿ, ಜಗಳೂರು ತಾಲೂಕು ನೌಕರ ಸಂಘದ ಅಧ್ಯಕ್ಷ ಬಿ .ಆರ್ .ಚಂದ್ರಪ್ಪ, ಸರ್ವೋತ್ತಮ ಸೇವಾ ಪ್ರಶಸ್ತಿ ಪುರಸ್ಕೃತ ವಾರ್ತಾ ಇಲಾಖೆಯ ಬಿ .ಎಸ್.ಬಸವರಾಜು, ಜಿಲ್ಲಾ ಖಜನೀಯ ಜುಬೇರ ಹಾಗೂ ಸಂಘದ ಎಲ್ಲಾ ಸದಸ್ಯರು ಪದಾಧಿಕಾರಿಗಳು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top